1:17 AM Friday23 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ಸೇವೆ ಮಾಡುವ ಅವಕಾಶದಿಂದ ವಂಚಿತನಾದ ನೋವು ಇದೆ: ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ

25/07/2024, 15:08

ಶಿವು ರಾಠೋಡ ನಾಲತವಾಡ ವಿಜಯಪುರ

info.reporterkarnataka@gmail.com

ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ನನ್ನನ್ನು ಸೋಲಿಸಿದರು. ನಾನಾರಿಗೂ ಮೋಸ ಮಾಡಿಲ್ಲದಿರುವುದೇ ನನ್ನ ಸಾಧನೆ. ಮೂರು ಬಾರಿ ನಿಮ್ಮ ಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸುವ ಅವಕಾಶವನ್ನು ಕೊಟ್ಟಿದ್ದಿರಿ. ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ತಿಳಿದವರು ನನ್ನನ್ನು ಸೋಲಿಸಿದರು, ನನಗೆ ಅಧಿಕಾರದ ಆಶೆಯ ಹುಚ್ಚಿಲ್ಲ, ನಾನು ಸೋತಾಗ ಐದು ವರ್ಷಗಳ ನಿಮ್ಮ ಸೇವೆ ಮಾಡುವ ಅವಕಾಶದಿಂದ ವಂಚಿತನಾದೆ ಎಂಬ ನೋವು ಒಂದು ಕ್ಷಣ ಕಾಡಿತು ಎಂದು ಕರ್ನಾಟಕ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.


ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದ ಸ್ಥಳೀಯ ರತ್ನ ಸಂಗಮ ಮಂಗಲ ಕಾರ್ಯಾಲಯದಲ್ಲಿ ಚಂದ್ರಶೇಖರ ಗಂಗನಗೌಡ್ರ ಗೆಳೆಯರ ಬಳಗದಡಿ ಹಮ್ಮಿಕೊಂಡಿದ್ದ ತಮ್ಮ 55ನೇ ಹುಟ್ಟುಹಬ್ಬ ಹಾಗೂ ಸಮಾಜ ಸೇವಕ ಚಂದ್ರಶೇಖರ ಗಂಗನಗೌಡ ಅವರ 45ನೇ ಹುಟ್ಡುಹಬ್ಬ ಆಚರಣೆಯ ಸಮಾರಂಭದಲ್ಲಿ ಮಾತನಾಡಿದರು.
ಎರಡು ಅಣೆಕಟ್ಟಿನ ನಡುವಿನ ಬಂಗಾರದ ಭೂಮಿಯಿದ್ದು, ಬಂಗಾರದ ಬೆಳೆ ಬೆಳೆ ಬೆಳೆಯಬೇಕು. ಭೂಮಿ ಇದ್ದವನೇ ಸಿರಿವಂತ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ಇದಕ್ಕೂ ಮೊದಲು ವೀರೇಶ್ವರ ಶರಣರ ಮಹಾಮನೆಯಲ್ಲಿ ಶರಣರಿಗೆ ಹಾಗೂ ಗೋ ಮಾತೆಗೆ ಪೂಜೆ ಸಲ್ಲಿಸಿದರು, ಡಾ.ಬಾಬಾಸಾಹೇಬ್ ಅಂಬೇಡ್ಕರ್, ಶರಣ ವೀರೇಶ್ವರರ, ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣಿ ಮಾಡಿ ಶರಣರ ಮಠದಿಂದ ಮೆರವಣಿಗೆ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಬಂದರು. ಕೆಂಚಪ್ಪ ಬಿರಾದಾರ, ಎಂ.ಎಸ್.ಪಾಟೀಲ, ಮುತ್ತು ಅಂಗಡಿ, ಮುನ್ನಾಧಣಿ ನಾಡಗೌಡ್ರ, ಗಿರೀಶ್ ಪಾಟೀಲ ಮಾತನಾಡಿದರು.
ರಾಜು ಹಾದಿಮನಿ ಕಾರ್ಯಕ್ತಮ ನಿರೂಪಿಸಿ ವಂದಿಸಿದರು. ಬಿಜೆಪಿ ಮುಖಂಡ ಬಿ.ಎಂ.ತಾಳಿಕೋಟಿ ವಕೀಲರು ಸೇರಿದಂತೆ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು