5:16 AM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಸೇವೆ ಮಾಡುವ ಅವಕಾಶದಿಂದ ವಂಚಿತನಾದ ನೋವು ಇದೆ: ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ

25/07/2024, 15:08

ಶಿವು ರಾಠೋಡ ನಾಲತವಾಡ ವಿಜಯಪುರ

info.reporterkarnataka@gmail.com

ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ನನ್ನನ್ನು ಸೋಲಿಸಿದರು. ನಾನಾರಿಗೂ ಮೋಸ ಮಾಡಿಲ್ಲದಿರುವುದೇ ನನ್ನ ಸಾಧನೆ. ಮೂರು ಬಾರಿ ನಿಮ್ಮ ಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸುವ ಅವಕಾಶವನ್ನು ಕೊಟ್ಟಿದ್ದಿರಿ. ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ತಿಳಿದವರು ನನ್ನನ್ನು ಸೋಲಿಸಿದರು, ನನಗೆ ಅಧಿಕಾರದ ಆಶೆಯ ಹುಚ್ಚಿಲ್ಲ, ನಾನು ಸೋತಾಗ ಐದು ವರ್ಷಗಳ ನಿಮ್ಮ ಸೇವೆ ಮಾಡುವ ಅವಕಾಶದಿಂದ ವಂಚಿತನಾದೆ ಎಂಬ ನೋವು ಒಂದು ಕ್ಷಣ ಕಾಡಿತು ಎಂದು ಕರ್ನಾಟಕ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.


ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದ ಸ್ಥಳೀಯ ರತ್ನ ಸಂಗಮ ಮಂಗಲ ಕಾರ್ಯಾಲಯದಲ್ಲಿ ಚಂದ್ರಶೇಖರ ಗಂಗನಗೌಡ್ರ ಗೆಳೆಯರ ಬಳಗದಡಿ ಹಮ್ಮಿಕೊಂಡಿದ್ದ ತಮ್ಮ 55ನೇ ಹುಟ್ಟುಹಬ್ಬ ಹಾಗೂ ಸಮಾಜ ಸೇವಕ ಚಂದ್ರಶೇಖರ ಗಂಗನಗೌಡ ಅವರ 45ನೇ ಹುಟ್ಡುಹಬ್ಬ ಆಚರಣೆಯ ಸಮಾರಂಭದಲ್ಲಿ ಮಾತನಾಡಿದರು.
ಎರಡು ಅಣೆಕಟ್ಟಿನ ನಡುವಿನ ಬಂಗಾರದ ಭೂಮಿಯಿದ್ದು, ಬಂಗಾರದ ಬೆಳೆ ಬೆಳೆ ಬೆಳೆಯಬೇಕು. ಭೂಮಿ ಇದ್ದವನೇ ಸಿರಿವಂತ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ಇದಕ್ಕೂ ಮೊದಲು ವೀರೇಶ್ವರ ಶರಣರ ಮಹಾಮನೆಯಲ್ಲಿ ಶರಣರಿಗೆ ಹಾಗೂ ಗೋ ಮಾತೆಗೆ ಪೂಜೆ ಸಲ್ಲಿಸಿದರು, ಡಾ.ಬಾಬಾಸಾಹೇಬ್ ಅಂಬೇಡ್ಕರ್, ಶರಣ ವೀರೇಶ್ವರರ, ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣಿ ಮಾಡಿ ಶರಣರ ಮಠದಿಂದ ಮೆರವಣಿಗೆ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಬಂದರು. ಕೆಂಚಪ್ಪ ಬಿರಾದಾರ, ಎಂ.ಎಸ್.ಪಾಟೀಲ, ಮುತ್ತು ಅಂಗಡಿ, ಮುನ್ನಾಧಣಿ ನಾಡಗೌಡ್ರ, ಗಿರೀಶ್ ಪಾಟೀಲ ಮಾತನಾಡಿದರು.
ರಾಜು ಹಾದಿಮನಿ ಕಾರ್ಯಕ್ತಮ ನಿರೂಪಿಸಿ ವಂದಿಸಿದರು. ಬಿಜೆಪಿ ಮುಖಂಡ ಬಿ.ಎಂ.ತಾಳಿಕೋಟಿ ವಕೀಲರು ಸೇರಿದಂತೆ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು