10:25 PM Thursday9 - July 2026
ಬ್ರೇಕಿಂಗ್ ನ್ಯೂಸ್
ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:…

ಇತ್ತೀಚಿನ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿಂದೆ ಬಿಜೆಪಿ ಯುವಮೋರ್ಚಾ ಕೈವಾಡ: ದ.ಕ. ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್

15/05/2026, 22:19

ಮಂಗಳೂರು(reporterkarnataka.com): ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಕದ್ರಿ ಸರ್ಕಲ್‌ನಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್, ನೀಟ್ ಪರೀಕ್ಷೆಯಂತಹ ದೇಶದ ಮಹತ್ವದ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಅತ್ಯಂತ ಆಘಾತಕಾರಿ. ಕೇಂದ್ರ ಸರ್ಕಾರ ಪರೀಕ್ಷಾ ವ್ಯವಸ್ಥೆಯನ್ನು ಪಾರದರ್ಶಕವಾಗಿ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಹಗರಣದ ಹಿಂದೆ ಬಿಜೆಪಿ ಯುವ ಮೋರ್ಚಾದ ಸದಸ್ಯರ ಜಾಲ ಸಕ್ರಿಯವಾಗಿದ್ದು, ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಕಳೆದ ಕೆಲವು ವರ್ಷಗಳಿಂದ ವಿವಿಧ ರಾಷ್ಟ್ರೀಯ ಪರೀಕ್ಷೆಗಳಲ್ಲಿ ಪದೇ ಪದೇ ಅಕ್ರಮಗಳು ನಡೆಯುತ್ತಿದ್ದು, ಪರೀಕ್ಷಾ ವ್ಯವಸ್ಥೆಯ ಮೇಲಿನ ಜನರ ನಂಬಿಕೆ ಕುಸಿಯುತ್ತಿದೆ. ದೇಶದ ಜನರಿಗೆ “ಅಚ್ಚೇ ದಿನ್” ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ, ಕಳೆದ ಹಲವು ವರ್ಷಗಳಲ್ಲಿ ಜನಸಾಮಾನ್ಯರ ಬದುಕನ್ನು ದುಬಾರಿ ಜೀವನದ ಸಂಕಷ್ಟಕ್ಕೆ ತಳ್ಳಿದೆ. ಅದಾನಿ, ಅಂಬಾನಿಗಳಂತಹ ಕಾರ್ಪೊರೇಟ್ ಸಾಮ್ರಾಜ್ಯಗಳಿಗೆ ‘ಅಮೃತಕಾಲ’ವನ್ನೇ ಮೋದಿ ಸರಕಾರ ಧಾರೆ ಎರೆದಿದೆ ಎಂದು ಹೇಳಿದರು.


ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರಾದ ಅಪ್ಪಿ, ಲಾರೆನ್ಸ್ ಡಿಸೋಜಾ, ಸುಹಾನ್ ಆಳ್ವ, ಮುಖಂಡರಾದ ಸುಹೈಲ್ ಕಂದಕ್, ಅಭಿನಂದ್ ಹರೀಶ್, ಬಶೀರ್, ನವಾಝ್ ನರಿಂಗಾನ, ಹಾಶೀರ್ ಪೆರಿಮಾರ್, ಫೈಝಲ್, ಗೋಪಿನಾಥ್, ಹಕೀಂ, ಪೃಥ್ವಿರಾಜ್, ಇಮ್ತಿಯಾಝ್ ಕಲ್ಲಡ್ಕ , ಮಿಥೇಶ್, ರಿತೇಶ್ ಅಂಚನ್, ಸುಮಂಥ್, ಫಯಾಝ್ ಅಮ್ಮೆಮ್ಮಾರ್, ಚಂದ್ರಕಲಾ ಜೋಗಿ, ಸಾರಿಕ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು