5:17 AM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಸೇವೆ ಮಾಡುವ ಅವಕಾಶದಿಂದ ವಂಚಿತನಾದ ನೋವು ಇದೆ: ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ

25/07/2024, 15:08

ಶಿವು ರಾಠೋಡ ನಾಲತವಾಡ ವಿಜಯಪುರ

info.reporterkarnataka@gmail.com

ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ನನ್ನನ್ನು ಸೋಲಿಸಿದರು. ನಾನಾರಿಗೂ ಮೋಸ ಮಾಡಿಲ್ಲದಿರುವುದೇ ನನ್ನ ಸಾಧನೆ. ಮೂರು ಬಾರಿ ನಿಮ್ಮ ಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸುವ ಅವಕಾಶವನ್ನು ಕೊಟ್ಟಿದ್ದಿರಿ. ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ತಿಳಿದವರು ನನ್ನನ್ನು ಸೋಲಿಸಿದರು, ನನಗೆ ಅಧಿಕಾರದ ಆಶೆಯ ಹುಚ್ಚಿಲ್ಲ, ನಾನು ಸೋತಾಗ ಐದು ವರ್ಷಗಳ ನಿಮ್ಮ ಸೇವೆ ಮಾಡುವ ಅವಕಾಶದಿಂದ ವಂಚಿತನಾದೆ ಎಂಬ ನೋವು ಒಂದು ಕ್ಷಣ ಕಾಡಿತು ಎಂದು ಕರ್ನಾಟಕ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.


ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದ ಸ್ಥಳೀಯ ರತ್ನ ಸಂಗಮ ಮಂಗಲ ಕಾರ್ಯಾಲಯದಲ್ಲಿ ಚಂದ್ರಶೇಖರ ಗಂಗನಗೌಡ್ರ ಗೆಳೆಯರ ಬಳಗದಡಿ ಹಮ್ಮಿಕೊಂಡಿದ್ದ ತಮ್ಮ 55ನೇ ಹುಟ್ಟುಹಬ್ಬ ಹಾಗೂ ಸಮಾಜ ಸೇವಕ ಚಂದ್ರಶೇಖರ ಗಂಗನಗೌಡ ಅವರ 45ನೇ ಹುಟ್ಡುಹಬ್ಬ ಆಚರಣೆಯ ಸಮಾರಂಭದಲ್ಲಿ ಮಾತನಾಡಿದರು.
ಎರಡು ಅಣೆಕಟ್ಟಿನ ನಡುವಿನ ಬಂಗಾರದ ಭೂಮಿಯಿದ್ದು, ಬಂಗಾರದ ಬೆಳೆ ಬೆಳೆ ಬೆಳೆಯಬೇಕು. ಭೂಮಿ ಇದ್ದವನೇ ಸಿರಿವಂತ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ಇದಕ್ಕೂ ಮೊದಲು ವೀರೇಶ್ವರ ಶರಣರ ಮಹಾಮನೆಯಲ್ಲಿ ಶರಣರಿಗೆ ಹಾಗೂ ಗೋ ಮಾತೆಗೆ ಪೂಜೆ ಸಲ್ಲಿಸಿದರು, ಡಾ.ಬಾಬಾಸಾಹೇಬ್ ಅಂಬೇಡ್ಕರ್, ಶರಣ ವೀರೇಶ್ವರರ, ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣಿ ಮಾಡಿ ಶರಣರ ಮಠದಿಂದ ಮೆರವಣಿಗೆ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಬಂದರು. ಕೆಂಚಪ್ಪ ಬಿರಾದಾರ, ಎಂ.ಎಸ್.ಪಾಟೀಲ, ಮುತ್ತು ಅಂಗಡಿ, ಮುನ್ನಾಧಣಿ ನಾಡಗೌಡ್ರ, ಗಿರೀಶ್ ಪಾಟೀಲ ಮಾತನಾಡಿದರು.
ರಾಜು ಹಾದಿಮನಿ ಕಾರ್ಯಕ್ತಮ ನಿರೂಪಿಸಿ ವಂದಿಸಿದರು. ಬಿಜೆಪಿ ಮುಖಂಡ ಬಿ.ಎಂ.ತಾಳಿಕೋಟಿ ವಕೀಲರು ಸೇರಿದಂತೆ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು