12:03 PM Monday16 - February 2026
ಬ್ರೇಕಿಂಗ್ ನ್ಯೂಸ್
ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ…

ಇತ್ತೀಚಿನ ಸುದ್ದಿ

ಸೇವೆ ಮಾಡುವ ಅವಕಾಶದಿಂದ ವಂಚಿತನಾದ ನೋವು ಇದೆ: ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ

25/07/2024, 15:08

ಶಿವು ರಾಠೋಡ ನಾಲತವಾಡ ವಿಜಯಪುರ

info.reporterkarnataka@gmail.com

ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ನನ್ನನ್ನು ಸೋಲಿಸಿದರು. ನಾನಾರಿಗೂ ಮೋಸ ಮಾಡಿಲ್ಲದಿರುವುದೇ ನನ್ನ ಸಾಧನೆ. ಮೂರು ಬಾರಿ ನಿಮ್ಮ ಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸುವ ಅವಕಾಶವನ್ನು ಕೊಟ್ಟಿದ್ದಿರಿ. ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ತಿಳಿದವರು ನನ್ನನ್ನು ಸೋಲಿಸಿದರು, ನನಗೆ ಅಧಿಕಾರದ ಆಶೆಯ ಹುಚ್ಚಿಲ್ಲ, ನಾನು ಸೋತಾಗ ಐದು ವರ್ಷಗಳ ನಿಮ್ಮ ಸೇವೆ ಮಾಡುವ ಅವಕಾಶದಿಂದ ವಂಚಿತನಾದೆ ಎಂಬ ನೋವು ಒಂದು ಕ್ಷಣ ಕಾಡಿತು ಎಂದು ಕರ್ನಾಟಕ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.


ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದ ಸ್ಥಳೀಯ ರತ್ನ ಸಂಗಮ ಮಂಗಲ ಕಾರ್ಯಾಲಯದಲ್ಲಿ ಚಂದ್ರಶೇಖರ ಗಂಗನಗೌಡ್ರ ಗೆಳೆಯರ ಬಳಗದಡಿ ಹಮ್ಮಿಕೊಂಡಿದ್ದ ತಮ್ಮ 55ನೇ ಹುಟ್ಟುಹಬ್ಬ ಹಾಗೂ ಸಮಾಜ ಸೇವಕ ಚಂದ್ರಶೇಖರ ಗಂಗನಗೌಡ ಅವರ 45ನೇ ಹುಟ್ಡುಹಬ್ಬ ಆಚರಣೆಯ ಸಮಾರಂಭದಲ್ಲಿ ಮಾತನಾಡಿದರು.
ಎರಡು ಅಣೆಕಟ್ಟಿನ ನಡುವಿನ ಬಂಗಾರದ ಭೂಮಿಯಿದ್ದು, ಬಂಗಾರದ ಬೆಳೆ ಬೆಳೆ ಬೆಳೆಯಬೇಕು. ಭೂಮಿ ಇದ್ದವನೇ ಸಿರಿವಂತ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ಇದಕ್ಕೂ ಮೊದಲು ವೀರೇಶ್ವರ ಶರಣರ ಮಹಾಮನೆಯಲ್ಲಿ ಶರಣರಿಗೆ ಹಾಗೂ ಗೋ ಮಾತೆಗೆ ಪೂಜೆ ಸಲ್ಲಿಸಿದರು, ಡಾ.ಬಾಬಾಸಾಹೇಬ್ ಅಂಬೇಡ್ಕರ್, ಶರಣ ವೀರೇಶ್ವರರ, ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣಿ ಮಾಡಿ ಶರಣರ ಮಠದಿಂದ ಮೆರವಣಿಗೆ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಬಂದರು. ಕೆಂಚಪ್ಪ ಬಿರಾದಾರ, ಎಂ.ಎಸ್.ಪಾಟೀಲ, ಮುತ್ತು ಅಂಗಡಿ, ಮುನ್ನಾಧಣಿ ನಾಡಗೌಡ್ರ, ಗಿರೀಶ್ ಪಾಟೀಲ ಮಾತನಾಡಿದರು.
ರಾಜು ಹಾದಿಮನಿ ಕಾರ್ಯಕ್ತಮ ನಿರೂಪಿಸಿ ವಂದಿಸಿದರು. ಬಿಜೆಪಿ ಮುಖಂಡ ಬಿ.ಎಂ.ತಾಳಿಕೋಟಿ ವಕೀಲರು ಸೇರಿದಂತೆ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು