12:28 AM Saturday18 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

*ಬಿಎಂಟಿಸಿ ಬಸ್’ನಿಂದ ಸಾರಿಗೆ ಸಚಿವ ಭೈರತಿ ಸುರೇಶ್ ಅವರನ್ನು ಕೆಳಗಿಳಿಸಿದ್ದ ಬಸ್ ಡ್ರೈವರ್, ಕಂಡಕ್ಟರ್ ಸಸ್ಪೆಂಡ್*

12/07/2026, 22:08

ಬೆಂಗಳೂರು(reporterkarnataka.com): ಸಿಲಿಕಾನ್ ಸಿಟಿ ಜನರ ಜೀವನಾಡಿಯಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್‌ಗಳ ಮೇಲಿನ ಅವಲಂಬನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಸಾರ್ವಜನಿಕರಿಂದ ಬಿಎಂಟಿಸಿ ಸಿಬ್ಬಂದಿ ವಿರುದ್ಧ ಸಾಲು ಸಾಲು ದೂರುಗಳು ಕೇಳಿಬರುತ್ತಿದ್ದವು. ಬಸ್ ನಿಲ್ಲಿಸದಿರುವುದು, ಚಿಲ್ಲರೆ ಸಮಸ್ಯೆ ಹಾಗೂ ಪ್ರಯಾಣಿಕರೊಂದಿಗೆ ಉದ್ಧಟತನದ ವರ್ತನೆ ತೋರುವ ಘಟನೆಗಳು ಮರುಕಳಿಸುತ್ತಿದ್ದವು. ಈ ಹಿನ್ನೆಲೆಯಲ್ಲಿ ಸ್ವತಃ ಸಾರಿಗೆ ಸಚಿವರು ಬಿಎಂಟಿಸಿ ಬಸ್ ಹತ್ತಿ ಪ್ರಯಾಣಿಕರ ಕಷ್ಟ-ಸುಖಗಳನ್ನು ಅರಿಯಲು ‘ರಿಯಾಲಿಟಿ ಚೆಕ್’ ನಡೆಸಿದಾಗ ಅಚ್ಚರಿಯ ಹಾಗೂ ಶಾಕಿಂಗ್ ಘಟನೆಗಳು ಬೆಳಕಿಗೆ ಬಂದಿವೆ.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ‘ಶಕ್ತಿ ಯೋಜನೆ’ಯಿಂದಾಗಿ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟದಲ್ಲಿದೆ ಮತ್ತು ದಿವಾಳಿಯಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಇಂತಹ ಟೀಕೆಗಳ ನಡುವೆಯೇ ಸಾರ್ವಜನಿಕರ ನಿತ್ಯದ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಲು ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಶನಿವಾರ ಸಂಜೆ ದಿಢೀರ್ ಆಗಿ ಬಿಎಂಟಿಸಿ ಬಸ್‌ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ಪ್ರಯಾಣ ಬೆಳೆಸಿದರು. ಜಯಮಹಲ್‌ನಿಂದ ಆರಂಭವಾದ ಇವರ ರಿಯಾಲಿಟಿ ಚೆಕ್ ಸಂಚಾರವು ಟಿವಿ ಟವರ್, ಆರ್.ಟಿ. ನಗರ, ಸಿಬಿಐ ರಸ್ತೆ, ಮಸೀದಿ ನಿಲ್ದಾಣ, ಬಳ್ಳಾರಿ ಮುಖ್ಯರಸ್ತೆ ಹಾಗೂ ಹೆಬ್ಬಾಳದವರೆಗೆ ಸಾಗಿತು. ಅಲ್ಲಿಂದ ಮುಂದೆ ಭೂಪಸಂದ್ರ, ರಿಂಗ್ ರಸ್ತೆ ಮೂಲಕ ಮಾನ್ಯತಾ ಟೆಕ್ ಪಾರ್ಕ್, ನಾಗವಾರ ಮತ್ತು ಹೆಣ್ಣೂರು ಮಾರ್ಗವಾಗಿ ಗೆದ್ಲಹಳ್ಳಿಯವರೆಗೆ ಸಚಿವರು ಸಂಚರಿಸಿದರು.
ಈ ರಿಯಾಲಿಟಿ ಚೆಕ್ ವೇಳೆ ಹೆಬ್ಬಾಳ-ನಾಗಶೆಟ್ಟಿಹಳ್ಳಿ ಮಾರ್ಗದ ಬಿಎಂಟಿಸಿ ಬಸ್ ಹತ್ತಿದ ಸಾರಿಗೆ ಸಚಿವರಿಗೆ ಸಾರ್ವಜನಿಕರು ನಿತ್ಯ ಎದುರಿಸುವ ಚಿಲ್ಲರೆ ಸಮಸ್ಯೆಯ ಕಹಿ ಅನುಭವ ದಕ್ಕಿತು. ಬಸ್ ಹತ್ತಿದ ತಕ್ಷಣ ಎಂದಿನಂತೆ ಕಂಡಕ್ಟರ್ “ಟಿಕೆಟ್… ಟಿಕೆಟ್…” ಎಂದು ಸಚಿವರನ್ನು ಕೇಳಿದ್ದಾರೆ. ಆಗ ಸಚಿವರು ಟಿಕೆಟ್‌ಗಾಗಿ 100 ರೂಪಾಯಿ ನೋಟು ನೀಡಿದ್ದಾರೆ. ಆದರೆ ಸಚಿವರನ್ನು ಗುರುತಿಸದ ಕಂಡಕ್ಟರ್, “ನನ್ನ ಬಳಿಯೂ ಚಿಲ್ಲರೆ ಇಲ್ಲ” ಎಂದು ಖಾಲಿ ಬ್ಯಾಗ್ ತೋರಿಸಿ, “ಚಿಲ್ಲರೆ ಇಲ್ಲದಿದ್ದರೆ ಬಸ್‌ನಿಂದ ಕೆಳಗೆ ಇಳಿಯಿರಿ” ಎಂದು ನೇರವಾಗಿಯೇ ಹೇಳಿದ್ದಾರೆ. ಕಂಡಕ್ಟರ್‌ನ ಈ ಖಡಕ್ ಪ್ರತಿಕ್ರಿಯೆಯನ್ನು ಕಂಡ ಸಚಿವರು ಯಾವುದೇ ಆಕ್ರೋಶ ವ್ಯಕ್ತಪಡಿಸದೇ, ಮೌನವಾಗಿ ಬಸ್‌ನಿಂದ ಕೆಳಗೆ ಇಳಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು