3:44 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬಾಲಿವುಡ್ ನಟ, ದಾನಿ ಸೋನು ಸೂದ್‌ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ: ಕೇಜ್ರೀವಾಲ್ ಜತೆ ಸೋನು ಮಾತನಾಡಿದ್ದು ಏನು?

15/09/2021, 19:37

ಮುಂಬೈ(reporterkarnataka.com): ಬಾಲಿವುಡ್  ನಟ, ಸಮಾಜ ಸೇವಕ, ಮಹಾನ್ ದಾನಿ ಸೋನು ಸೂದ್ ಅವರ ಮುಂಬೈ ಕಚೇರಿ ಸೇರಿದಂತೆ 6 ಕಡೆಗಳಿಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.

ಮುಂಬೈನಲ್ಲಿ ಅವರ ನಿವಾಸ ಹಾಗೂ ಲಕ್ನೋದ ಕಂಪನಿಯು ಸೇರಿದಂತೆ ಅವರಿಗೆ ಸಂಬಂಧಿಸಿದ ಒಟ್ಟು 6 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಸೋನು ಅವರ ಆದಾಯದ ಮೂಲಗಳಿಗೆ ಸಂಬಂಧಿಸಿದಂತೆ ಅವರ ಕಚೇರಿಯಲ್ಲಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆ ಸೋನುಸೂದ್ ನಡೆಸಿದ ಮಾತುಕತೆ ಹಾಗೂ ಕಾರ್ಯಕ್ರಮವೊಂದಕ್ಕೆ ರಾಯಭಾರಿಯಾಗಿ ಆಯ್ಕೆಯಾದ ಬಳಿಕ ಐಟಿ ದಾಳಿ ನಡೆದಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿ ನಟ ಸೋನು ಸಾವಿರಾರು ಮಂದಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು. ವಿಶೇಷವಾಗಿ ಲಾಕ್‌ಡೌನ್‌ನಲ್ಲಿ ಬೇರೆ ರಾಜ್ಯ ಅಥವಾ ಬೇರೆ ಊರುಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಮರಳಿ ಊರಿಗೆ ಕಳುಹಿಸಲು ನೆರವಾಗಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೋನುಸೂದ್ ಹೆಸರು ಪ್ರಖ್ಯಾತಿಗೊಂಡಿತ್ತು. ಇತ್ತೀಚೆಗೆ ದೆಹಲಿ ಸರ್ಕಾರದ ‘ದೇಶ್ ಕೆ ಮಂಟರ್ಸ್’ ನ ಬ್ರಾಂಡ್ ಅಂಬಾಸಿಡರ್ ಆಗಿ ಅವರು ನೇಮಕಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು