10:43 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬಾಲಿವುಡ್ ನಟ, ದಾನಿ ಸೋನು ಸೂದ್‌ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ: ಕೇಜ್ರೀವಾಲ್ ಜತೆ ಸೋನು ಮಾತನಾಡಿದ್ದು ಏನು?

15/09/2021, 19:37

ಮುಂಬೈ(reporterkarnataka.com): ಬಾಲಿವುಡ್  ನಟ, ಸಮಾಜ ಸೇವಕ, ಮಹಾನ್ ದಾನಿ ಸೋನು ಸೂದ್ ಅವರ ಮುಂಬೈ ಕಚೇರಿ ಸೇರಿದಂತೆ 6 ಕಡೆಗಳಿಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.

ಮುಂಬೈನಲ್ಲಿ ಅವರ ನಿವಾಸ ಹಾಗೂ ಲಕ್ನೋದ ಕಂಪನಿಯು ಸೇರಿದಂತೆ ಅವರಿಗೆ ಸಂಬಂಧಿಸಿದ ಒಟ್ಟು 6 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಸೋನು ಅವರ ಆದಾಯದ ಮೂಲಗಳಿಗೆ ಸಂಬಂಧಿಸಿದಂತೆ ಅವರ ಕಚೇರಿಯಲ್ಲಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆ ಸೋನುಸೂದ್ ನಡೆಸಿದ ಮಾತುಕತೆ ಹಾಗೂ ಕಾರ್ಯಕ್ರಮವೊಂದಕ್ಕೆ ರಾಯಭಾರಿಯಾಗಿ ಆಯ್ಕೆಯಾದ ಬಳಿಕ ಐಟಿ ದಾಳಿ ನಡೆದಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿ ನಟ ಸೋನು ಸಾವಿರಾರು ಮಂದಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು. ವಿಶೇಷವಾಗಿ ಲಾಕ್‌ಡೌನ್‌ನಲ್ಲಿ ಬೇರೆ ರಾಜ್ಯ ಅಥವಾ ಬೇರೆ ಊರುಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಮರಳಿ ಊರಿಗೆ ಕಳುಹಿಸಲು ನೆರವಾಗಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೋನುಸೂದ್ ಹೆಸರು ಪ್ರಖ್ಯಾತಿಗೊಂಡಿತ್ತು. ಇತ್ತೀಚೆಗೆ ದೆಹಲಿ ಸರ್ಕಾರದ ‘ದೇಶ್ ಕೆ ಮಂಟರ್ಸ್’ ನ ಬ್ರಾಂಡ್ ಅಂಬಾಸಿಡರ್ ಆಗಿ ಅವರು ನೇಮಕಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು