9:49 PM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬಾಲಿವುಡ್ ನಟ, ದಾನಿ ಸೋನು ಸೂದ್‌ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ: ಕೇಜ್ರೀವಾಲ್ ಜತೆ ಸೋನು ಮಾತನಾಡಿದ್ದು ಏನು?

15/09/2021, 19:37

ಮುಂಬೈ(reporterkarnataka.com): ಬಾಲಿವುಡ್  ನಟ, ಸಮಾಜ ಸೇವಕ, ಮಹಾನ್ ದಾನಿ ಸೋನು ಸೂದ್ ಅವರ ಮುಂಬೈ ಕಚೇರಿ ಸೇರಿದಂತೆ 6 ಕಡೆಗಳಿಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.

ಮುಂಬೈನಲ್ಲಿ ಅವರ ನಿವಾಸ ಹಾಗೂ ಲಕ್ನೋದ ಕಂಪನಿಯು ಸೇರಿದಂತೆ ಅವರಿಗೆ ಸಂಬಂಧಿಸಿದ ಒಟ್ಟು 6 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಸೋನು ಅವರ ಆದಾಯದ ಮೂಲಗಳಿಗೆ ಸಂಬಂಧಿಸಿದಂತೆ ಅವರ ಕಚೇರಿಯಲ್ಲಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆ ಸೋನುಸೂದ್ ನಡೆಸಿದ ಮಾತುಕತೆ ಹಾಗೂ ಕಾರ್ಯಕ್ರಮವೊಂದಕ್ಕೆ ರಾಯಭಾರಿಯಾಗಿ ಆಯ್ಕೆಯಾದ ಬಳಿಕ ಐಟಿ ದಾಳಿ ನಡೆದಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿ ನಟ ಸೋನು ಸಾವಿರಾರು ಮಂದಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು. ವಿಶೇಷವಾಗಿ ಲಾಕ್‌ಡೌನ್‌ನಲ್ಲಿ ಬೇರೆ ರಾಜ್ಯ ಅಥವಾ ಬೇರೆ ಊರುಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಮರಳಿ ಊರಿಗೆ ಕಳುಹಿಸಲು ನೆರವಾಗಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೋನುಸೂದ್ ಹೆಸರು ಪ್ರಖ್ಯಾತಿಗೊಂಡಿತ್ತು. ಇತ್ತೀಚೆಗೆ ದೆಹಲಿ ಸರ್ಕಾರದ ‘ದೇಶ್ ಕೆ ಮಂಟರ್ಸ್’ ನ ಬ್ರಾಂಡ್ ಅಂಬಾಸಿಡರ್ ಆಗಿ ಅವರು ನೇಮಕಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು