6:02 AM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಬಾಲಿವುಡ್ ನಟ, ದಾನಿ ಸೋನು ಸೂದ್‌ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ: ಕೇಜ್ರೀವಾಲ್ ಜತೆ ಸೋನು ಮಾತನಾಡಿದ್ದು ಏನು?

15/09/2021, 19:37

ಮುಂಬೈ(reporterkarnataka.com): ಬಾಲಿವುಡ್  ನಟ, ಸಮಾಜ ಸೇವಕ, ಮಹಾನ್ ದಾನಿ ಸೋನು ಸೂದ್ ಅವರ ಮುಂಬೈ ಕಚೇರಿ ಸೇರಿದಂತೆ 6 ಕಡೆಗಳಿಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.

ಮುಂಬೈನಲ್ಲಿ ಅವರ ನಿವಾಸ ಹಾಗೂ ಲಕ್ನೋದ ಕಂಪನಿಯು ಸೇರಿದಂತೆ ಅವರಿಗೆ ಸಂಬಂಧಿಸಿದ ಒಟ್ಟು 6 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಸೋನು ಅವರ ಆದಾಯದ ಮೂಲಗಳಿಗೆ ಸಂಬಂಧಿಸಿದಂತೆ ಅವರ ಕಚೇರಿಯಲ್ಲಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆ ಸೋನುಸೂದ್ ನಡೆಸಿದ ಮಾತುಕತೆ ಹಾಗೂ ಕಾರ್ಯಕ್ರಮವೊಂದಕ್ಕೆ ರಾಯಭಾರಿಯಾಗಿ ಆಯ್ಕೆಯಾದ ಬಳಿಕ ಐಟಿ ದಾಳಿ ನಡೆದಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿ ನಟ ಸೋನು ಸಾವಿರಾರು ಮಂದಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು. ವಿಶೇಷವಾಗಿ ಲಾಕ್‌ಡೌನ್‌ನಲ್ಲಿ ಬೇರೆ ರಾಜ್ಯ ಅಥವಾ ಬೇರೆ ಊರುಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಮರಳಿ ಊರಿಗೆ ಕಳುಹಿಸಲು ನೆರವಾಗಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೋನುಸೂದ್ ಹೆಸರು ಪ್ರಖ್ಯಾತಿಗೊಂಡಿತ್ತು. ಇತ್ತೀಚೆಗೆ ದೆಹಲಿ ಸರ್ಕಾರದ ‘ದೇಶ್ ಕೆ ಮಂಟರ್ಸ್’ ನ ಬ್ರಾಂಡ್ ಅಂಬಾಸಿಡರ್ ಆಗಿ ಅವರು ನೇಮಕಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು