5:15 PM Wednesday20 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ

ಇತ್ತೀಚಿನ ಸುದ್ದಿ

ಬಾಲಿವುಡ್ ನಟ, ದಾನಿ ಸೋನು ಸೂದ್‌ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ: ಕೇಜ್ರೀವಾಲ್ ಜತೆ ಸೋನು ಮಾತನಾಡಿದ್ದು ಏನು?

15/09/2021, 19:37

ಮುಂಬೈ(reporterkarnataka.com): ಬಾಲಿವುಡ್  ನಟ, ಸಮಾಜ ಸೇವಕ, ಮಹಾನ್ ದಾನಿ ಸೋನು ಸೂದ್ ಅವರ ಮುಂಬೈ ಕಚೇರಿ ಸೇರಿದಂತೆ 6 ಕಡೆಗಳಿಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.

ಮುಂಬೈನಲ್ಲಿ ಅವರ ನಿವಾಸ ಹಾಗೂ ಲಕ್ನೋದ ಕಂಪನಿಯು ಸೇರಿದಂತೆ ಅವರಿಗೆ ಸಂಬಂಧಿಸಿದ ಒಟ್ಟು 6 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಸೋನು ಅವರ ಆದಾಯದ ಮೂಲಗಳಿಗೆ ಸಂಬಂಧಿಸಿದಂತೆ ಅವರ ಕಚೇರಿಯಲ್ಲಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆ ಸೋನುಸೂದ್ ನಡೆಸಿದ ಮಾತುಕತೆ ಹಾಗೂ ಕಾರ್ಯಕ್ರಮವೊಂದಕ್ಕೆ ರಾಯಭಾರಿಯಾಗಿ ಆಯ್ಕೆಯಾದ ಬಳಿಕ ಐಟಿ ದಾಳಿ ನಡೆದಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿ ನಟ ಸೋನು ಸಾವಿರಾರು ಮಂದಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು. ವಿಶೇಷವಾಗಿ ಲಾಕ್‌ಡೌನ್‌ನಲ್ಲಿ ಬೇರೆ ರಾಜ್ಯ ಅಥವಾ ಬೇರೆ ಊರುಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಮರಳಿ ಊರಿಗೆ ಕಳುಹಿಸಲು ನೆರವಾಗಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೋನುಸೂದ್ ಹೆಸರು ಪ್ರಖ್ಯಾತಿಗೊಂಡಿತ್ತು. ಇತ್ತೀಚೆಗೆ ದೆಹಲಿ ಸರ್ಕಾರದ ‘ದೇಶ್ ಕೆ ಮಂಟರ್ಸ್’ ನ ಬ್ರಾಂಡ್ ಅಂಬಾಸಿಡರ್ ಆಗಿ ಅವರು ನೇಮಕಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು