8:27 AM Monday20 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ಬಾಲಿವುಡ್ ನಟ, ದಾನಿ ಸೋನು ಸೂದ್‌ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ: ಕೇಜ್ರೀವಾಲ್ ಜತೆ ಸೋನು ಮಾತನಾಡಿದ್ದು ಏನು?

15/09/2021, 19:37

ಮುಂಬೈ(reporterkarnataka.com): ಬಾಲಿವುಡ್  ನಟ, ಸಮಾಜ ಸೇವಕ, ಮಹಾನ್ ದಾನಿ ಸೋನು ಸೂದ್ ಅವರ ಮುಂಬೈ ಕಚೇರಿ ಸೇರಿದಂತೆ 6 ಕಡೆಗಳಿಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.

ಮುಂಬೈನಲ್ಲಿ ಅವರ ನಿವಾಸ ಹಾಗೂ ಲಕ್ನೋದ ಕಂಪನಿಯು ಸೇರಿದಂತೆ ಅವರಿಗೆ ಸಂಬಂಧಿಸಿದ ಒಟ್ಟು 6 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಸೋನು ಅವರ ಆದಾಯದ ಮೂಲಗಳಿಗೆ ಸಂಬಂಧಿಸಿದಂತೆ ಅವರ ಕಚೇರಿಯಲ್ಲಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆ ಸೋನುಸೂದ್ ನಡೆಸಿದ ಮಾತುಕತೆ ಹಾಗೂ ಕಾರ್ಯಕ್ರಮವೊಂದಕ್ಕೆ ರಾಯಭಾರಿಯಾಗಿ ಆಯ್ಕೆಯಾದ ಬಳಿಕ ಐಟಿ ದಾಳಿ ನಡೆದಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿ ನಟ ಸೋನು ಸಾವಿರಾರು ಮಂದಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು. ವಿಶೇಷವಾಗಿ ಲಾಕ್‌ಡೌನ್‌ನಲ್ಲಿ ಬೇರೆ ರಾಜ್ಯ ಅಥವಾ ಬೇರೆ ಊರುಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಮರಳಿ ಊರಿಗೆ ಕಳುಹಿಸಲು ನೆರವಾಗಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೋನುಸೂದ್ ಹೆಸರು ಪ್ರಖ್ಯಾತಿಗೊಂಡಿತ್ತು. ಇತ್ತೀಚೆಗೆ ದೆಹಲಿ ಸರ್ಕಾರದ ‘ದೇಶ್ ಕೆ ಮಂಟರ್ಸ್’ ನ ಬ್ರಾಂಡ್ ಅಂಬಾಸಿಡರ್ ಆಗಿ ಅವರು ನೇಮಕಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು