3:52 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಬಾಲಿವುಡ್ ನಟ, ದಾನಿ ಸೋನು ಸೂದ್‌ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ: ಕೇಜ್ರೀವಾಲ್ ಜತೆ ಸೋನು ಮಾತನಾಡಿದ್ದು ಏನು?

15/09/2021, 19:37

ಮುಂಬೈ(reporterkarnataka.com): ಬಾಲಿವುಡ್  ನಟ, ಸಮಾಜ ಸೇವಕ, ಮಹಾನ್ ದಾನಿ ಸೋನು ಸೂದ್ ಅವರ ಮುಂಬೈ ಕಚೇರಿ ಸೇರಿದಂತೆ 6 ಕಡೆಗಳಿಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.

ಮುಂಬೈನಲ್ಲಿ ಅವರ ನಿವಾಸ ಹಾಗೂ ಲಕ್ನೋದ ಕಂಪನಿಯು ಸೇರಿದಂತೆ ಅವರಿಗೆ ಸಂಬಂಧಿಸಿದ ಒಟ್ಟು 6 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಸೋನು ಅವರ ಆದಾಯದ ಮೂಲಗಳಿಗೆ ಸಂಬಂಧಿಸಿದಂತೆ ಅವರ ಕಚೇರಿಯಲ್ಲಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆ ಸೋನುಸೂದ್ ನಡೆಸಿದ ಮಾತುಕತೆ ಹಾಗೂ ಕಾರ್ಯಕ್ರಮವೊಂದಕ್ಕೆ ರಾಯಭಾರಿಯಾಗಿ ಆಯ್ಕೆಯಾದ ಬಳಿಕ ಐಟಿ ದಾಳಿ ನಡೆದಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿ ನಟ ಸೋನು ಸಾವಿರಾರು ಮಂದಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು. ವಿಶೇಷವಾಗಿ ಲಾಕ್‌ಡೌನ್‌ನಲ್ಲಿ ಬೇರೆ ರಾಜ್ಯ ಅಥವಾ ಬೇರೆ ಊರುಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಮರಳಿ ಊರಿಗೆ ಕಳುಹಿಸಲು ನೆರವಾಗಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೋನುಸೂದ್ ಹೆಸರು ಪ್ರಖ್ಯಾತಿಗೊಂಡಿತ್ತು. ಇತ್ತೀಚೆಗೆ ದೆಹಲಿ ಸರ್ಕಾರದ ‘ದೇಶ್ ಕೆ ಮಂಟರ್ಸ್’ ನ ಬ್ರಾಂಡ್ ಅಂಬಾಸಿಡರ್ ಆಗಿ ಅವರು ನೇಮಕಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು