12:12 AM Sunday26 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ 28 ಪ್ರಕರಣಗಳ ಸರದಾರ, ಕುಖ್ಯಾತ ಆರೋಪಿಯ ಬಂಧನ

21/09/2023, 00:09

ಮಂಗಳೂರು(reporterkarnataka.com): ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 7 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಜಾಲ್ ಫೈಸಲ್ ನಗರದ ತಲ್ಲತ್(39) ಬಂಧಿತ ಆರೋಪಿ
ಆರೋಪಿಯು 2004ರಲ್ಲಿ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದವನು. ನಂತರ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಮುಂಬೈ ಮುಂತಾದ ಕಡೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆ ಯತ್ನ, ಕೊಲೆ, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಅಪಹರಣ ಹೀಗೆ ಒಟ್ಟು 28 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.
ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ಆರೋಪಿಯು ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಬಳಿಕ ಆರೋಪಿಯು ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಸಿಸಿಬಿ ಪೊಲೀಸರು ಬಂಧಿಸಿ
ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಆರೋಪಿ ಪತ್ತೆ ಕಾರ್ಯ ದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು