9:54 AM Monday27 - April 2026
ಬ್ರೇಕಿಂಗ್ ನ್ಯೂಸ್
New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ 28 ಪ್ರಕರಣಗಳ ಸರದಾರ, ಕುಖ್ಯಾತ ಆರೋಪಿಯ ಬಂಧನ

21/09/2023, 00:09

ಮಂಗಳೂರು(reporterkarnataka.com): ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 7 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಜಾಲ್ ಫೈಸಲ್ ನಗರದ ತಲ್ಲತ್(39) ಬಂಧಿತ ಆರೋಪಿ
ಆರೋಪಿಯು 2004ರಲ್ಲಿ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದವನು. ನಂತರ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಮುಂಬೈ ಮುಂತಾದ ಕಡೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆ ಯತ್ನ, ಕೊಲೆ, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಅಪಹರಣ ಹೀಗೆ ಒಟ್ಟು 28 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.
ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ಆರೋಪಿಯು ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಬಳಿಕ ಆರೋಪಿಯು ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಸಿಸಿಬಿ ಪೊಲೀಸರು ಬಂಧಿಸಿ
ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಆರೋಪಿ ಪತ್ತೆ ಕಾರ್ಯ ದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು