10:39 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;…

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ 28 ಪ್ರಕರಣಗಳ ಸರದಾರ, ಕುಖ್ಯಾತ ಆರೋಪಿಯ ಬಂಧನ

21/09/2023, 00:09

ಮಂಗಳೂರು(reporterkarnataka.com): ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 7 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಜಾಲ್ ಫೈಸಲ್ ನಗರದ ತಲ್ಲತ್(39) ಬಂಧಿತ ಆರೋಪಿ
ಆರೋಪಿಯು 2004ರಲ್ಲಿ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದವನು. ನಂತರ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಮುಂಬೈ ಮುಂತಾದ ಕಡೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆ ಯತ್ನ, ಕೊಲೆ, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಅಪಹರಣ ಹೀಗೆ ಒಟ್ಟು 28 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.
ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ಆರೋಪಿಯು ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಬಳಿಕ ಆರೋಪಿಯು ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಸಿಸಿಬಿ ಪೊಲೀಸರು ಬಂಧಿಸಿ
ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಆರೋಪಿ ಪತ್ತೆ ಕಾರ್ಯ ದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು