11:35 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ 28 ಪ್ರಕರಣಗಳ ಸರದಾರ, ಕುಖ್ಯಾತ ಆರೋಪಿಯ ಬಂಧನ

21/09/2023, 00:09

ಮಂಗಳೂರು(reporterkarnataka.com): ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 7 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಜಾಲ್ ಫೈಸಲ್ ನಗರದ ತಲ್ಲತ್(39) ಬಂಧಿತ ಆರೋಪಿ
ಆರೋಪಿಯು 2004ರಲ್ಲಿ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದವನು. ನಂತರ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಮುಂಬೈ ಮುಂತಾದ ಕಡೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆ ಯತ್ನ, ಕೊಲೆ, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಅಪಹರಣ ಹೀಗೆ ಒಟ್ಟು 28 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.
ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ಆರೋಪಿಯು ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಬಳಿಕ ಆರೋಪಿಯು ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಸಿಸಿಬಿ ಪೊಲೀಸರು ಬಂಧಿಸಿ
ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಆರೋಪಿ ಪತ್ತೆ ಕಾರ್ಯ ದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು