10:45 PM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ಕುಖ್ಯಾತ ಆರೋಪಿ ವಿಕ್ಕಿ ಬಪ್ಪಾಲ್ ಹಾಗೂ ಆತನ ಪತ್ನಿ ಸೆರೆ; ಗಾಂಜಾ ವಶ

16/07/2022, 20:55

ಮಂಗಳೂರು(reporterkarnataka.com): ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾ ಹೊಂದಿದ ಆರೋಪದ ಮೇಲೆ ಕುಖ್ಯಾತ ಆರೋಪಿ ಹಾಗೂ ಆತನ ಪತ್ನಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್‌ಐ ರಾಜೇಂದ್ರ ಬಿ.  ಅವರ ನೇತೃತ್ವದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಗರದ ಕಾವೂರು ಶಂಕರ ನಗರ ಕೆ. ಸಿ. ಆಳ್ವ ಲೇಔಟ್ ನ ಮನೆಯೊಂದಕ್ಕೆ ದಾಳಿ ನಡೆಸಿ
ಗಾಂಜಾವನ್ನು ಹೊಂದಿದ್ದ ಆರೋಪಿ ವಿಕ್ಕಿ ಬಪ್ಪಾಲ್(28) ಹಾಗೂ ಆತನ ಪತ್ನಿ ಅಂಜನಾ(21) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ಒಟ್ಟು 22 ಸಾವಿರ ರೂ.

ಮೌಲ್ಯದ ಗಾಂಜಾ, 1,500 ರೂ. ನಗದು, ಮೊಬೈಲ್ ಫೋನ್-1 ಮತ್ತು ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಂಡಿದ್ದಾರೆ.

ಗಾಂಜಾ ಮಾರಾಟ ಜಾಲದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳನ್ನು ಮಾದಕ ವಸ್ತುಗಳ ಸೇವನೆ ಬಗ್ಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವ ಬಗ್ಗೆ ದೃಢಪಟ್ಟಿರುತ್ತದೆ. ಆರೋಪಿಗಳ ಪೈಕಿ ವಿಕ್ಕಿ ಬಪ್ಪಾಲ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ನಗರದ ದಕ್ಷಿಣ, ಉತ್ತರ, ಬರ್ಕೆ, ಉರ್ವಾ, ಗ್ರಾಮಾಂತರ, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆ ಯತ್ನ, ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಹಾಗೂ ಕಿಡ್ನಾಫ್ ಗೆ ಸಂಬಂಧಪಟ್ಟಂತೆ ಒಟ್ಟು 13 ಪ್ರಕರಣಗಳು ದಾಖಲಾಗಿರುತ್ತದೆ. ಅಂಜನಾ ವಿರುದ್ಧ ಈ ಹಿಂದೆ ಕಂಕನಾಡಿ ನಗರ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಹಾಗೂ ಆತನ ಪತ್ನಿ ಜೊತೆ ಸೇರಿಕೊಂಡು ಮಂಗಳೂರು ನಗರದ ಎಂಜಿ ರಸ್ತೆಯಲ್ಲಿರುವ

ವಿದ್ಯಾಸಂಸ್ಥೆಗಳ ಪರಿಸರದಲ್ಲಿ, ಕೆಪಿಟಿ, ಕದ್ರಿ, ಜೆಪ್ಪು ಬಪ್ಪಾಲ್ ಪರಿಸರದಲ್ಲಿ ಗಾಂಜಾವನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಸೆನ್ ಕೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು