10:45 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಿಕ್ಕಬಳ್ಳಾಪುರ ಕೋರ್ಟ್ ರಸ್ತೆಯ ಯುಜಿಡಿ ಗುಂಡಿಯಿಂದ ದುರ್ನಾತ ಬೀರುವ ನೀರಿನ ಹೊಳೆ: ಮೂಗು ಮುಚ್ಚಿ ಸಾಗುವ ನಾಗರಿಕರು!

28/06/2022, 22:20

ಆಶಾ ಮಂಚನಬಲೆ ಚಿಕ್ಕಬಳ್ಳಾಪುರ

info.reporterkarnataka@gmail.com

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ತೋಟಗಾರಿಕೆ ಇಲಾಖೆಯ ಮುಂಭಾಗದಿಂದ ಜಿಲ್ಲಾ ಕೇಂದ್ರ ಗ್ರಂಥಾಲಯದ ಕೊನೆಯವರೆಗೂ ಯುಜಿಡಿ ಗುಂಡಿಯ ನೀರು ಹರಿಯುತ್ತಿದ್ದು, ಇಡೀ ಪರಿಸರ ದುರ್ನಾತ ಬೀರುತ್ತಿದೆ. ಕೊರೊನಾ ಸಾಂಕ್ರಾಮಿಕದ ಇಂದಿನ ಕಾಲಘಟ್ಟದಲ್ಲಿ ಇದರಿಂದ ನಗರದ ಜನತೆಯ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ.


ಯುಜಿಡಿ ದುರ್ಗಂಧಭರಿತ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ  ಸಾರ್ವಜನಿಕರು, ಮಕ್ಕಳು, ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ದ್ವಿಚಕ್ರ ವಾಹನಗಳು, ಬಸ್ಸು, ಕಾರು ಸಂಚರಿಸುವಾಗ ಅಲ್ಲಿನ ಗಬ್ಬು ನಾತ ಬೀರುತ್ತಿರುವ ನೀರು ಹಾರಿ ಜನರಿಗೆ ಕಿರಿ ಕಿರಿ ಉಂಟಾಗುತ್ತಿದೆ. ನಗರದ ಹೃದಯ ಭಾಗದಲ್ಲಿರುವ ಕೋರ್ಟ್ ರಸ್ತೆಯಲ್ಲಿಯೇ ಇಂತಹ ದುಸ್ಥಿತಿ ಯಾದರೆ ಇನ್ನೂ ಸ್ಲುಂಗಳ ಪರಿಸ್ಥಿತಿ ಹೇಗೆ?ಎಂಬುದು ಕೌತುಕವಾಗಿದೆ.


ನಗರಸಭೆಯ ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕ ಸ್ಥಳದಲ್ಲಿ ಆಗುವ ತೊಂದರೆಯನ್ನು ಪರಿಶೀಲಿಸಿ  ಕ್ರಮ ವಹಿಸಬೇಕಾಗಿ ನಾಗರಿಕರು ಮನವಿ ಮಾಡಿದ್ದಾರೆ.

ಈಗಾಗಲೇ  ಎರಡು ವರ್ಷಗಳಿಂದ ಕೋವಿಡ್ 19 ಕಾಯಿಲೆಯನ್ನು ಎದುರಿಸಿ ,ಸಾವು ನೋವುಗಳನ್ನು ಅನುಭವಿಸಿ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರೆ, ಇದರ ಬೆನ್ನಲ್ಲೇ ಹೊಸ ಕಾಯಿಲೆಗಳಿಗೆ ಎಡೆಮಾಡಿಕೊಡುತ್ತಿರುವ ಈ ಹೊಲಸು ನೀರು ರಸ್ತೆಯ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿರುವುದು ವಿಪರ್ಯಾಸ.


ಅತೀ ಶೀಘ್ರದಲ್ಲೇ ಹೊಸಕಾಯಿಲೆ ಉದ್ಭವವಾಗುವ ಎಲ್ಲಾ ಸಾಧ್ಯತೆಗಳೂ ಎದ್ದು ಕಾಣುತ್ತಿವೆ ಎಂದು ಸಮಾಜ ಸೇವೆ ಸಲ್ಲಿಸುತ್ತಿರುವ ಆಶಾ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಆಶಾ ಮಂಚನಬಲೆ ಅವರು, ಸಾರ್ವಜನಿಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು