12:20 PM Sunday17 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ಚಿಕ್ಕಬಳ್ಳಾಪುರ ಕೋರ್ಟ್ ರಸ್ತೆಯ ಯುಜಿಡಿ ಗುಂಡಿಯಿಂದ ದುರ್ನಾತ ಬೀರುವ ನೀರಿನ ಹೊಳೆ: ಮೂಗು ಮುಚ್ಚಿ ಸಾಗುವ ನಾಗರಿಕರು!

28/06/2022, 22:20

ಆಶಾ ಮಂಚನಬಲೆ ಚಿಕ್ಕಬಳ್ಳಾಪುರ

info.reporterkarnataka@gmail.com

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ತೋಟಗಾರಿಕೆ ಇಲಾಖೆಯ ಮುಂಭಾಗದಿಂದ ಜಿಲ್ಲಾ ಕೇಂದ್ರ ಗ್ರಂಥಾಲಯದ ಕೊನೆಯವರೆಗೂ ಯುಜಿಡಿ ಗುಂಡಿಯ ನೀರು ಹರಿಯುತ್ತಿದ್ದು, ಇಡೀ ಪರಿಸರ ದುರ್ನಾತ ಬೀರುತ್ತಿದೆ. ಕೊರೊನಾ ಸಾಂಕ್ರಾಮಿಕದ ಇಂದಿನ ಕಾಲಘಟ್ಟದಲ್ಲಿ ಇದರಿಂದ ನಗರದ ಜನತೆಯ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ.


ಯುಜಿಡಿ ದುರ್ಗಂಧಭರಿತ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ  ಸಾರ್ವಜನಿಕರು, ಮಕ್ಕಳು, ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ದ್ವಿಚಕ್ರ ವಾಹನಗಳು, ಬಸ್ಸು, ಕಾರು ಸಂಚರಿಸುವಾಗ ಅಲ್ಲಿನ ಗಬ್ಬು ನಾತ ಬೀರುತ್ತಿರುವ ನೀರು ಹಾರಿ ಜನರಿಗೆ ಕಿರಿ ಕಿರಿ ಉಂಟಾಗುತ್ತಿದೆ. ನಗರದ ಹೃದಯ ಭಾಗದಲ್ಲಿರುವ ಕೋರ್ಟ್ ರಸ್ತೆಯಲ್ಲಿಯೇ ಇಂತಹ ದುಸ್ಥಿತಿ ಯಾದರೆ ಇನ್ನೂ ಸ್ಲುಂಗಳ ಪರಿಸ್ಥಿತಿ ಹೇಗೆ?ಎಂಬುದು ಕೌತುಕವಾಗಿದೆ.


ನಗರಸಭೆಯ ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕ ಸ್ಥಳದಲ್ಲಿ ಆಗುವ ತೊಂದರೆಯನ್ನು ಪರಿಶೀಲಿಸಿ  ಕ್ರಮ ವಹಿಸಬೇಕಾಗಿ ನಾಗರಿಕರು ಮನವಿ ಮಾಡಿದ್ದಾರೆ.

ಈಗಾಗಲೇ  ಎರಡು ವರ್ಷಗಳಿಂದ ಕೋವಿಡ್ 19 ಕಾಯಿಲೆಯನ್ನು ಎದುರಿಸಿ ,ಸಾವು ನೋವುಗಳನ್ನು ಅನುಭವಿಸಿ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರೆ, ಇದರ ಬೆನ್ನಲ್ಲೇ ಹೊಸ ಕಾಯಿಲೆಗಳಿಗೆ ಎಡೆಮಾಡಿಕೊಡುತ್ತಿರುವ ಈ ಹೊಲಸು ನೀರು ರಸ್ತೆಯ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿರುವುದು ವಿಪರ್ಯಾಸ.


ಅತೀ ಶೀಘ್ರದಲ್ಲೇ ಹೊಸಕಾಯಿಲೆ ಉದ್ಭವವಾಗುವ ಎಲ್ಲಾ ಸಾಧ್ಯತೆಗಳೂ ಎದ್ದು ಕಾಣುತ್ತಿವೆ ಎಂದು ಸಮಾಜ ಸೇವೆ ಸಲ್ಲಿಸುತ್ತಿರುವ ಆಶಾ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಆಶಾ ಮಂಚನಬಲೆ ಅವರು, ಸಾರ್ವಜನಿಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು