2:48 PM Monday24 - November 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಇತ್ತೀಚಿನ ಸುದ್ದಿ

ಚಿಕ್ಕಬಳ್ಳಾಪುರ ಕೋರ್ಟ್ ರಸ್ತೆಯ ಯುಜಿಡಿ ಗುಂಡಿಯಿಂದ ದುರ್ನಾತ ಬೀರುವ ನೀರಿನ ಹೊಳೆ: ಮೂಗು ಮುಚ್ಚಿ ಸಾಗುವ ನಾಗರಿಕರು!

28/06/2022, 22:20

ಆಶಾ ಮಂಚನಬಲೆ ಚಿಕ್ಕಬಳ್ಳಾಪುರ

info.reporterkarnataka@gmail.com

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ತೋಟಗಾರಿಕೆ ಇಲಾಖೆಯ ಮುಂಭಾಗದಿಂದ ಜಿಲ್ಲಾ ಕೇಂದ್ರ ಗ್ರಂಥಾಲಯದ ಕೊನೆಯವರೆಗೂ ಯುಜಿಡಿ ಗುಂಡಿಯ ನೀರು ಹರಿಯುತ್ತಿದ್ದು, ಇಡೀ ಪರಿಸರ ದುರ್ನಾತ ಬೀರುತ್ತಿದೆ. ಕೊರೊನಾ ಸಾಂಕ್ರಾಮಿಕದ ಇಂದಿನ ಕಾಲಘಟ್ಟದಲ್ಲಿ ಇದರಿಂದ ನಗರದ ಜನತೆಯ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ.


ಯುಜಿಡಿ ದುರ್ಗಂಧಭರಿತ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ  ಸಾರ್ವಜನಿಕರು, ಮಕ್ಕಳು, ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ದ್ವಿಚಕ್ರ ವಾಹನಗಳು, ಬಸ್ಸು, ಕಾರು ಸಂಚರಿಸುವಾಗ ಅಲ್ಲಿನ ಗಬ್ಬು ನಾತ ಬೀರುತ್ತಿರುವ ನೀರು ಹಾರಿ ಜನರಿಗೆ ಕಿರಿ ಕಿರಿ ಉಂಟಾಗುತ್ತಿದೆ. ನಗರದ ಹೃದಯ ಭಾಗದಲ್ಲಿರುವ ಕೋರ್ಟ್ ರಸ್ತೆಯಲ್ಲಿಯೇ ಇಂತಹ ದುಸ್ಥಿತಿ ಯಾದರೆ ಇನ್ನೂ ಸ್ಲುಂಗಳ ಪರಿಸ್ಥಿತಿ ಹೇಗೆ?ಎಂಬುದು ಕೌತುಕವಾಗಿದೆ.


ನಗರಸಭೆಯ ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕ ಸ್ಥಳದಲ್ಲಿ ಆಗುವ ತೊಂದರೆಯನ್ನು ಪರಿಶೀಲಿಸಿ  ಕ್ರಮ ವಹಿಸಬೇಕಾಗಿ ನಾಗರಿಕರು ಮನವಿ ಮಾಡಿದ್ದಾರೆ.

ಈಗಾಗಲೇ  ಎರಡು ವರ್ಷಗಳಿಂದ ಕೋವಿಡ್ 19 ಕಾಯಿಲೆಯನ್ನು ಎದುರಿಸಿ ,ಸಾವು ನೋವುಗಳನ್ನು ಅನುಭವಿಸಿ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರೆ, ಇದರ ಬೆನ್ನಲ್ಲೇ ಹೊಸ ಕಾಯಿಲೆಗಳಿಗೆ ಎಡೆಮಾಡಿಕೊಡುತ್ತಿರುವ ಈ ಹೊಲಸು ನೀರು ರಸ್ತೆಯ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿರುವುದು ವಿಪರ್ಯಾಸ.


ಅತೀ ಶೀಘ್ರದಲ್ಲೇ ಹೊಸಕಾಯಿಲೆ ಉದ್ಭವವಾಗುವ ಎಲ್ಲಾ ಸಾಧ್ಯತೆಗಳೂ ಎದ್ದು ಕಾಣುತ್ತಿವೆ ಎಂದು ಸಮಾಜ ಸೇವೆ ಸಲ್ಲಿಸುತ್ತಿರುವ ಆಶಾ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಆಶಾ ಮಂಚನಬಲೆ ಅವರು, ಸಾರ್ವಜನಿಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು