1:05 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಿಕ್ಕಬಳ್ಳಾಪುರ ಕೋರ್ಟ್ ರಸ್ತೆಯ ಯುಜಿಡಿ ಗುಂಡಿಯಿಂದ ದುರ್ನಾತ ಬೀರುವ ನೀರಿನ ಹೊಳೆ: ಮೂಗು ಮುಚ್ಚಿ ಸಾಗುವ ನಾಗರಿಕರು!

28/06/2022, 22:20

ಆಶಾ ಮಂಚನಬಲೆ ಚಿಕ್ಕಬಳ್ಳಾಪುರ

info.reporterkarnataka@gmail.com

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ತೋಟಗಾರಿಕೆ ಇಲಾಖೆಯ ಮುಂಭಾಗದಿಂದ ಜಿಲ್ಲಾ ಕೇಂದ್ರ ಗ್ರಂಥಾಲಯದ ಕೊನೆಯವರೆಗೂ ಯುಜಿಡಿ ಗುಂಡಿಯ ನೀರು ಹರಿಯುತ್ತಿದ್ದು, ಇಡೀ ಪರಿಸರ ದುರ್ನಾತ ಬೀರುತ್ತಿದೆ. ಕೊರೊನಾ ಸಾಂಕ್ರಾಮಿಕದ ಇಂದಿನ ಕಾಲಘಟ್ಟದಲ್ಲಿ ಇದರಿಂದ ನಗರದ ಜನತೆಯ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ.


ಯುಜಿಡಿ ದುರ್ಗಂಧಭರಿತ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ  ಸಾರ್ವಜನಿಕರು, ಮಕ್ಕಳು, ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ದ್ವಿಚಕ್ರ ವಾಹನಗಳು, ಬಸ್ಸು, ಕಾರು ಸಂಚರಿಸುವಾಗ ಅಲ್ಲಿನ ಗಬ್ಬು ನಾತ ಬೀರುತ್ತಿರುವ ನೀರು ಹಾರಿ ಜನರಿಗೆ ಕಿರಿ ಕಿರಿ ಉಂಟಾಗುತ್ತಿದೆ. ನಗರದ ಹೃದಯ ಭಾಗದಲ್ಲಿರುವ ಕೋರ್ಟ್ ರಸ್ತೆಯಲ್ಲಿಯೇ ಇಂತಹ ದುಸ್ಥಿತಿ ಯಾದರೆ ಇನ್ನೂ ಸ್ಲುಂಗಳ ಪರಿಸ್ಥಿತಿ ಹೇಗೆ?ಎಂಬುದು ಕೌತುಕವಾಗಿದೆ.


ನಗರಸಭೆಯ ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕ ಸ್ಥಳದಲ್ಲಿ ಆಗುವ ತೊಂದರೆಯನ್ನು ಪರಿಶೀಲಿಸಿ  ಕ್ರಮ ವಹಿಸಬೇಕಾಗಿ ನಾಗರಿಕರು ಮನವಿ ಮಾಡಿದ್ದಾರೆ.

ಈಗಾಗಲೇ  ಎರಡು ವರ್ಷಗಳಿಂದ ಕೋವಿಡ್ 19 ಕಾಯಿಲೆಯನ್ನು ಎದುರಿಸಿ ,ಸಾವು ನೋವುಗಳನ್ನು ಅನುಭವಿಸಿ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರೆ, ಇದರ ಬೆನ್ನಲ್ಲೇ ಹೊಸ ಕಾಯಿಲೆಗಳಿಗೆ ಎಡೆಮಾಡಿಕೊಡುತ್ತಿರುವ ಈ ಹೊಲಸು ನೀರು ರಸ್ತೆಯ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿರುವುದು ವಿಪರ್ಯಾಸ.


ಅತೀ ಶೀಘ್ರದಲ್ಲೇ ಹೊಸಕಾಯಿಲೆ ಉದ್ಭವವಾಗುವ ಎಲ್ಲಾ ಸಾಧ್ಯತೆಗಳೂ ಎದ್ದು ಕಾಣುತ್ತಿವೆ ಎಂದು ಸಮಾಜ ಸೇವೆ ಸಲ್ಲಿಸುತ್ತಿರುವ ಆಶಾ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಆಶಾ ಮಂಚನಬಲೆ ಅವರು, ಸಾರ್ವಜನಿಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು