4:42 PM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಚಿಕ್ಕಬಳ್ಳಾಪುರ ಕೋರ್ಟ್ ರಸ್ತೆಯ ಯುಜಿಡಿ ಗುಂಡಿಯಿಂದ ದುರ್ನಾತ ಬೀರುವ ನೀರಿನ ಹೊಳೆ: ಮೂಗು ಮುಚ್ಚಿ ಸಾಗುವ ನಾಗರಿಕರು!

28/06/2022, 22:20

ಆಶಾ ಮಂಚನಬಲೆ ಚಿಕ್ಕಬಳ್ಳಾಪುರ

info.reporterkarnataka@gmail.com

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ತೋಟಗಾರಿಕೆ ಇಲಾಖೆಯ ಮುಂಭಾಗದಿಂದ ಜಿಲ್ಲಾ ಕೇಂದ್ರ ಗ್ರಂಥಾಲಯದ ಕೊನೆಯವರೆಗೂ ಯುಜಿಡಿ ಗುಂಡಿಯ ನೀರು ಹರಿಯುತ್ತಿದ್ದು, ಇಡೀ ಪರಿಸರ ದುರ್ನಾತ ಬೀರುತ್ತಿದೆ. ಕೊರೊನಾ ಸಾಂಕ್ರಾಮಿಕದ ಇಂದಿನ ಕಾಲಘಟ್ಟದಲ್ಲಿ ಇದರಿಂದ ನಗರದ ಜನತೆಯ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ.


ಯುಜಿಡಿ ದುರ್ಗಂಧಭರಿತ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ  ಸಾರ್ವಜನಿಕರು, ಮಕ್ಕಳು, ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ದ್ವಿಚಕ್ರ ವಾಹನಗಳು, ಬಸ್ಸು, ಕಾರು ಸಂಚರಿಸುವಾಗ ಅಲ್ಲಿನ ಗಬ್ಬು ನಾತ ಬೀರುತ್ತಿರುವ ನೀರು ಹಾರಿ ಜನರಿಗೆ ಕಿರಿ ಕಿರಿ ಉಂಟಾಗುತ್ತಿದೆ. ನಗರದ ಹೃದಯ ಭಾಗದಲ್ಲಿರುವ ಕೋರ್ಟ್ ರಸ್ತೆಯಲ್ಲಿಯೇ ಇಂತಹ ದುಸ್ಥಿತಿ ಯಾದರೆ ಇನ್ನೂ ಸ್ಲುಂಗಳ ಪರಿಸ್ಥಿತಿ ಹೇಗೆ?ಎಂಬುದು ಕೌತುಕವಾಗಿದೆ.


ನಗರಸಭೆಯ ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕ ಸ್ಥಳದಲ್ಲಿ ಆಗುವ ತೊಂದರೆಯನ್ನು ಪರಿಶೀಲಿಸಿ  ಕ್ರಮ ವಹಿಸಬೇಕಾಗಿ ನಾಗರಿಕರು ಮನವಿ ಮಾಡಿದ್ದಾರೆ.

ಈಗಾಗಲೇ  ಎರಡು ವರ್ಷಗಳಿಂದ ಕೋವಿಡ್ 19 ಕಾಯಿಲೆಯನ್ನು ಎದುರಿಸಿ ,ಸಾವು ನೋವುಗಳನ್ನು ಅನುಭವಿಸಿ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರೆ, ಇದರ ಬೆನ್ನಲ್ಲೇ ಹೊಸ ಕಾಯಿಲೆಗಳಿಗೆ ಎಡೆಮಾಡಿಕೊಡುತ್ತಿರುವ ಈ ಹೊಲಸು ನೀರು ರಸ್ತೆಯ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿರುವುದು ವಿಪರ್ಯಾಸ.


ಅತೀ ಶೀಘ್ರದಲ್ಲೇ ಹೊಸಕಾಯಿಲೆ ಉದ್ಭವವಾಗುವ ಎಲ್ಲಾ ಸಾಧ್ಯತೆಗಳೂ ಎದ್ದು ಕಾಣುತ್ತಿವೆ ಎಂದು ಸಮಾಜ ಸೇವೆ ಸಲ್ಲಿಸುತ್ತಿರುವ ಆಶಾ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಆಶಾ ಮಂಚನಬಲೆ ಅವರು, ಸಾರ್ವಜನಿಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು