7:39 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಿಕ್ಕಬಳ್ಳಾಪುರ ಕೋರ್ಟ್ ರಸ್ತೆಯ ಯುಜಿಡಿ ಗುಂಡಿಯಿಂದ ದುರ್ನಾತ ಬೀರುವ ನೀರಿನ ಹೊಳೆ: ಮೂಗು ಮುಚ್ಚಿ ಸಾಗುವ ನಾಗರಿಕರು!

28/06/2022, 22:20

ಆಶಾ ಮಂಚನಬಲೆ ಚಿಕ್ಕಬಳ್ಳಾಪುರ

info.reporterkarnataka@gmail.com

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ತೋಟಗಾರಿಕೆ ಇಲಾಖೆಯ ಮುಂಭಾಗದಿಂದ ಜಿಲ್ಲಾ ಕೇಂದ್ರ ಗ್ರಂಥಾಲಯದ ಕೊನೆಯವರೆಗೂ ಯುಜಿಡಿ ಗುಂಡಿಯ ನೀರು ಹರಿಯುತ್ತಿದ್ದು, ಇಡೀ ಪರಿಸರ ದುರ್ನಾತ ಬೀರುತ್ತಿದೆ. ಕೊರೊನಾ ಸಾಂಕ್ರಾಮಿಕದ ಇಂದಿನ ಕಾಲಘಟ್ಟದಲ್ಲಿ ಇದರಿಂದ ನಗರದ ಜನತೆಯ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ.


ಯುಜಿಡಿ ದುರ್ಗಂಧಭರಿತ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ  ಸಾರ್ವಜನಿಕರು, ಮಕ್ಕಳು, ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ದ್ವಿಚಕ್ರ ವಾಹನಗಳು, ಬಸ್ಸು, ಕಾರು ಸಂಚರಿಸುವಾಗ ಅಲ್ಲಿನ ಗಬ್ಬು ನಾತ ಬೀರುತ್ತಿರುವ ನೀರು ಹಾರಿ ಜನರಿಗೆ ಕಿರಿ ಕಿರಿ ಉಂಟಾಗುತ್ತಿದೆ. ನಗರದ ಹೃದಯ ಭಾಗದಲ್ಲಿರುವ ಕೋರ್ಟ್ ರಸ್ತೆಯಲ್ಲಿಯೇ ಇಂತಹ ದುಸ್ಥಿತಿ ಯಾದರೆ ಇನ್ನೂ ಸ್ಲುಂಗಳ ಪರಿಸ್ಥಿತಿ ಹೇಗೆ?ಎಂಬುದು ಕೌತುಕವಾಗಿದೆ.


ನಗರಸಭೆಯ ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕ ಸ್ಥಳದಲ್ಲಿ ಆಗುವ ತೊಂದರೆಯನ್ನು ಪರಿಶೀಲಿಸಿ  ಕ್ರಮ ವಹಿಸಬೇಕಾಗಿ ನಾಗರಿಕರು ಮನವಿ ಮಾಡಿದ್ದಾರೆ.

ಈಗಾಗಲೇ  ಎರಡು ವರ್ಷಗಳಿಂದ ಕೋವಿಡ್ 19 ಕಾಯಿಲೆಯನ್ನು ಎದುರಿಸಿ ,ಸಾವು ನೋವುಗಳನ್ನು ಅನುಭವಿಸಿ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರೆ, ಇದರ ಬೆನ್ನಲ್ಲೇ ಹೊಸ ಕಾಯಿಲೆಗಳಿಗೆ ಎಡೆಮಾಡಿಕೊಡುತ್ತಿರುವ ಈ ಹೊಲಸು ನೀರು ರಸ್ತೆಯ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿರುವುದು ವಿಪರ್ಯಾಸ.


ಅತೀ ಶೀಘ್ರದಲ್ಲೇ ಹೊಸಕಾಯಿಲೆ ಉದ್ಭವವಾಗುವ ಎಲ್ಲಾ ಸಾಧ್ಯತೆಗಳೂ ಎದ್ದು ಕಾಣುತ್ತಿವೆ ಎಂದು ಸಮಾಜ ಸೇವೆ ಸಲ್ಲಿಸುತ್ತಿರುವ ಆಶಾ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಆಶಾ ಮಂಚನಬಲೆ ಅವರು, ಸಾರ್ವಜನಿಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು