5:02 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಚಿಕ್ಕಬಳ್ಳಾಪುರ ಕೋರ್ಟ್ ರಸ್ತೆಯ ಯುಜಿಡಿ ಗುಂಡಿಯಿಂದ ದುರ್ನಾತ ಬೀರುವ ನೀರಿನ ಹೊಳೆ: ಮೂಗು ಮುಚ್ಚಿ ಸಾಗುವ ನಾಗರಿಕರು!

28/06/2022, 22:20

ಆಶಾ ಮಂಚನಬಲೆ ಚಿಕ್ಕಬಳ್ಳಾಪುರ

info.reporterkarnataka@gmail.com

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ತೋಟಗಾರಿಕೆ ಇಲಾಖೆಯ ಮುಂಭಾಗದಿಂದ ಜಿಲ್ಲಾ ಕೇಂದ್ರ ಗ್ರಂಥಾಲಯದ ಕೊನೆಯವರೆಗೂ ಯುಜಿಡಿ ಗುಂಡಿಯ ನೀರು ಹರಿಯುತ್ತಿದ್ದು, ಇಡೀ ಪರಿಸರ ದುರ್ನಾತ ಬೀರುತ್ತಿದೆ. ಕೊರೊನಾ ಸಾಂಕ್ರಾಮಿಕದ ಇಂದಿನ ಕಾಲಘಟ್ಟದಲ್ಲಿ ಇದರಿಂದ ನಗರದ ಜನತೆಯ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ.


ಯುಜಿಡಿ ದುರ್ಗಂಧಭರಿತ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ  ಸಾರ್ವಜನಿಕರು, ಮಕ್ಕಳು, ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ದ್ವಿಚಕ್ರ ವಾಹನಗಳು, ಬಸ್ಸು, ಕಾರು ಸಂಚರಿಸುವಾಗ ಅಲ್ಲಿನ ಗಬ್ಬು ನಾತ ಬೀರುತ್ತಿರುವ ನೀರು ಹಾರಿ ಜನರಿಗೆ ಕಿರಿ ಕಿರಿ ಉಂಟಾಗುತ್ತಿದೆ. ನಗರದ ಹೃದಯ ಭಾಗದಲ್ಲಿರುವ ಕೋರ್ಟ್ ರಸ್ತೆಯಲ್ಲಿಯೇ ಇಂತಹ ದುಸ್ಥಿತಿ ಯಾದರೆ ಇನ್ನೂ ಸ್ಲುಂಗಳ ಪರಿಸ್ಥಿತಿ ಹೇಗೆ?ಎಂಬುದು ಕೌತುಕವಾಗಿದೆ.


ನಗರಸಭೆಯ ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕ ಸ್ಥಳದಲ್ಲಿ ಆಗುವ ತೊಂದರೆಯನ್ನು ಪರಿಶೀಲಿಸಿ  ಕ್ರಮ ವಹಿಸಬೇಕಾಗಿ ನಾಗರಿಕರು ಮನವಿ ಮಾಡಿದ್ದಾರೆ.

ಈಗಾಗಲೇ  ಎರಡು ವರ್ಷಗಳಿಂದ ಕೋವಿಡ್ 19 ಕಾಯಿಲೆಯನ್ನು ಎದುರಿಸಿ ,ಸಾವು ನೋವುಗಳನ್ನು ಅನುಭವಿಸಿ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರೆ, ಇದರ ಬೆನ್ನಲ್ಲೇ ಹೊಸ ಕಾಯಿಲೆಗಳಿಗೆ ಎಡೆಮಾಡಿಕೊಡುತ್ತಿರುವ ಈ ಹೊಲಸು ನೀರು ರಸ್ತೆಯ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿರುವುದು ವಿಪರ್ಯಾಸ.


ಅತೀ ಶೀಘ್ರದಲ್ಲೇ ಹೊಸಕಾಯಿಲೆ ಉದ್ಭವವಾಗುವ ಎಲ್ಲಾ ಸಾಧ್ಯತೆಗಳೂ ಎದ್ದು ಕಾಣುತ್ತಿವೆ ಎಂದು ಸಮಾಜ ಸೇವೆ ಸಲ್ಲಿಸುತ್ತಿರುವ ಆಶಾ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಆಶಾ ಮಂಚನಬಲೆ ಅವರು, ಸಾರ್ವಜನಿಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು