10:48 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಚಿಕ್ಕಬಳ್ಳಾಪುರ ಕೋರ್ಟ್ ರಸ್ತೆಯ ಯುಜಿಡಿ ಗುಂಡಿಯಿಂದ ದುರ್ನಾತ ಬೀರುವ ನೀರಿನ ಹೊಳೆ: ಮೂಗು ಮುಚ್ಚಿ ಸಾಗುವ ನಾಗರಿಕರು!

28/06/2022, 22:20

ಆಶಾ ಮಂಚನಬಲೆ ಚಿಕ್ಕಬಳ್ಳಾಪುರ

info.reporterkarnataka@gmail.com

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ತೋಟಗಾರಿಕೆ ಇಲಾಖೆಯ ಮುಂಭಾಗದಿಂದ ಜಿಲ್ಲಾ ಕೇಂದ್ರ ಗ್ರಂಥಾಲಯದ ಕೊನೆಯವರೆಗೂ ಯುಜಿಡಿ ಗುಂಡಿಯ ನೀರು ಹರಿಯುತ್ತಿದ್ದು, ಇಡೀ ಪರಿಸರ ದುರ್ನಾತ ಬೀರುತ್ತಿದೆ. ಕೊರೊನಾ ಸಾಂಕ್ರಾಮಿಕದ ಇಂದಿನ ಕಾಲಘಟ್ಟದಲ್ಲಿ ಇದರಿಂದ ನಗರದ ಜನತೆಯ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ.


ಯುಜಿಡಿ ದುರ್ಗಂಧಭರಿತ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ  ಸಾರ್ವಜನಿಕರು, ಮಕ್ಕಳು, ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ದ್ವಿಚಕ್ರ ವಾಹನಗಳು, ಬಸ್ಸು, ಕಾರು ಸಂಚರಿಸುವಾಗ ಅಲ್ಲಿನ ಗಬ್ಬು ನಾತ ಬೀರುತ್ತಿರುವ ನೀರು ಹಾರಿ ಜನರಿಗೆ ಕಿರಿ ಕಿರಿ ಉಂಟಾಗುತ್ತಿದೆ. ನಗರದ ಹೃದಯ ಭಾಗದಲ್ಲಿರುವ ಕೋರ್ಟ್ ರಸ್ತೆಯಲ್ಲಿಯೇ ಇಂತಹ ದುಸ್ಥಿತಿ ಯಾದರೆ ಇನ್ನೂ ಸ್ಲುಂಗಳ ಪರಿಸ್ಥಿತಿ ಹೇಗೆ?ಎಂಬುದು ಕೌತುಕವಾಗಿದೆ.


ನಗರಸಭೆಯ ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕ ಸ್ಥಳದಲ್ಲಿ ಆಗುವ ತೊಂದರೆಯನ್ನು ಪರಿಶೀಲಿಸಿ  ಕ್ರಮ ವಹಿಸಬೇಕಾಗಿ ನಾಗರಿಕರು ಮನವಿ ಮಾಡಿದ್ದಾರೆ.

ಈಗಾಗಲೇ  ಎರಡು ವರ್ಷಗಳಿಂದ ಕೋವಿಡ್ 19 ಕಾಯಿಲೆಯನ್ನು ಎದುರಿಸಿ ,ಸಾವು ನೋವುಗಳನ್ನು ಅನುಭವಿಸಿ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದರೆ, ಇದರ ಬೆನ್ನಲ್ಲೇ ಹೊಸ ಕಾಯಿಲೆಗಳಿಗೆ ಎಡೆಮಾಡಿಕೊಡುತ್ತಿರುವ ಈ ಹೊಲಸು ನೀರು ರಸ್ತೆಯ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿರುವುದು ವಿಪರ್ಯಾಸ.


ಅತೀ ಶೀಘ್ರದಲ್ಲೇ ಹೊಸಕಾಯಿಲೆ ಉದ್ಭವವಾಗುವ ಎಲ್ಲಾ ಸಾಧ್ಯತೆಗಳೂ ಎದ್ದು ಕಾಣುತ್ತಿವೆ ಎಂದು ಸಮಾಜ ಸೇವೆ ಸಲ್ಲಿಸುತ್ತಿರುವ ಆಶಾ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಆಶಾ ಮಂಚನಬಲೆ ಅವರು, ಸಾರ್ವಜನಿಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು