12:27 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಿಂದ ಹಿಂದೂಗಳ ಮೇಲೆ ದಾಳಿ: ಬಿಜೆಪಿ ವಕ್ತಾರ ನಯನ ತಳವಾರ ಆರೋಪ

23/01/2024, 19:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕನ್ನಡದ ಪುಜಾರಿ. ಕಣ್ಮಣಿ ದೇಶ ಕಂಡ ಧೀಮಂತ ಚಿಂತಕ ಹಿರೇಮಗಳೂರು ಕಣ್ಣನ್ ಸೇರಿದಂತೆ ಅರ್ಚಕರಿಗೆ ಸರ್ಕಾರ ಕೊಟ್ಟ ಸಂಬಳವನ್ನು ವಾಪಸ್ ನೀಡಿ ಎಂದು ನೋಟಿಸ್ ನೀಡಿರುವುದು ಹಿಂದೂ ಶ್ರದ್ಧಾ ಕೇಂದ್ರ ದೇವಸ್ಥಾನಗಳನ್ನು ಮುಚ್ಚುವ ಕಾಂಗ್ರೆಸ್ ಸರ್ಕಾರದ ಹುನ್ನಾರ ಎಂದು ಬಿಜೆಪಿ ವಕ್ತಾರ ನಯನ ತಳವಾರ ಅರೋಸಿದ್ದಾರೆ.
ಶ್ರೀರಾಮ ದೇವಸ್ಥಾನ ನಿರ್ಮಾಣ ವಿರೋಧಿಸಿ ಪ್ರಾಣ ಪ್ರತಿಷ್ಠಾಪನೆ ಒಂದು ದಿನದ ರಜೆಯನ್ನು ನೀಡದೆ ಮಕ್ಕಳು, ಪೋಷಕರು ಮತ್ತು ಹಿಂದೂಗಳಿಂದ ಶಾಪ ಹಾಕಿಸಿಕೊಳ್ಳುತ್ತಿರುವ ಸಮಯದಲ್ಲೆ ಕನ್ನಡದಲ್ಲೇ ಮಂತ್ರ ಉಚ್ಚಾರಗಳನ್ನು ಇಡೀ ಸಮಾಜಕ್ಕೆ ನೀಡಿ ಈ ಮೂಲಕ ಮದುವೆ, ಪೂಜೆಗಳನ್ನು ಕನ್ನಡ ಮಯಗೋಳಿಸಿ ಶಾಸ್ತ್ರೀಯ ಭಾಷೆಯಾಗಿಸಲು ಸಹಕರಿಸಿದ ಹಿರೇಮಗಳೂರು ಕಣ್ಣನ್ ಇವರಿಗೆ ನಿಮ್ಮ ಕೊದಂಡರಾಮ ದೇವಸ್ಥಾನದಿಂದ ಆದಾಯ ಸರ್ಕಾರಕ್ಕೆ ಬರುತ್ತಿಲ್ಲ ಎಂಬ ಕಾರಣ ನೀಡಿ ಕೊಟ್ಟ ಸಂಬಳ ವಾಪಸ್ ನೀಡಿ ಎಂದು ನೋಟಿಸ್ ನೀಡಿರುವುದು ಖಂಡನೀಯ. ಸರ್ಕಾರ ರಾಜ್ಯದ ಹಲವು ದೇವಸ್ಥಾನಗಳನ್ನು ಮುಜರಾಯಿ ವ್ಯಾಪ್ತಿಗೆ ಸೇರಿಸಿಕೊಂಡು ಇದಕ್ಕೆ ಒಬ್ಬ ಸಚಿವರನ್ನು ಇಟ್ಟುಕೊಂಡು ಸಾವಿರಾರು ಕೋಟಿ ಹಣವನ್ನು ಹಲವು ದೇವಸ್ಥಾನಗಳಲ್ಲಿ ಭಕ್ತರಿಂದ ಸ್ವೀಕರಿಸಿ ಆ ಹಣವನ್ನು ಅಭಿವೃದ್ಧಿ ಹೆಸರಲ್ಲಿ ಬೇರೆ ದರ್ಮದ ಉದ್ದಾರಕ್ಕೆ ಬಳಸಿಕೊಂಡು ಅದನ್ನು ಕೊಳ್ಳೆ ಹೊಡೆಯುತ್ತಿದ್ದು ಈಗಾಗಲೇ ಸುಬ್ರಮಣ್ಯ. ಕಟೀಲು. ಕೊಲ್ಲೂರು ಮುಂತಾದ ದೇವಸ್ಥಾನಗಳಿಂದ ಬರುತ್ತಿರುವ ದೊಡ್ಡ ಮಟ್ಟದ ಆದಾಯವನ್ನು ಇವರು ವಾಪಸ್ ಅದೇ ದೇವಸ್ಥಾನಕ್ಕೆ ಮತ್ತು ಅರ್ಚಕರ ಸಂಬಳಕ್ಕೆ ನೀಡುತ್ತಾರೆಯೆ ಎಂದು ಪ್ರಶ್ನಿಸುತ್ತಿದ್ದು. ಒಂದು ಇಲಾಖೆ ನಡೆಯಬೇಕೆಂದರೆ ಲಾಭ ಇರುವ ಕಡೆಯಿಂದ ನಷ್ಟವನ್ನು ಬರಿಸಬೇಕು ಎಂಬ ನಿಯಮವನ್ನು ಅರಿಯದಷ್ಟು ಮೂಡರಾಗಿದ್ದು. ಈಗಾಗಲೆ ಪೂಜೆ ಮಾಡಲು ಅರ್ಚಕರು ಸಿಗದಷ್ಷು ವ್ಯವಸ್ಥೆ ಸೃಷ್ಠಿಯಾಗಿದ್ದು. ಬದುಕಲು ಪರದಾಡುತ್ತಿರುವ ಬಡ ದೇವಸ್ಥಾನಗಳ ಅರ್ಚಕರಿಗೆ ಕಾಂಗ್ರೆಸ್ ನೆತೃತ್ವದ ಸರ್ಕಾರ ನೋಟಿಸ್ ನೀಡುತ್ತಿರುವುದು ಶ್ರದ್ಧೆಯ ಹಿಂದೂ ಧರ್ಮದ ದೇವಾಲಯಗಳನ್ನು ಮುಚ್ಚುವ ಹುನ್ನಾರವಾಗಿದ್ದು. ಎನು ಅದಾಯ ಬರದ ಮದ್ರಸಾ. ಮಸೀದಿ ಚರ್ಚ್ ಗಳಿಗೆ ನೀಡುತ್ತಿರುವ ಅನುದಾನ ವಾಪಾಸು ಪಡೆಯಲು ನಿಮಗೆ ಸಾದ್ಯವೆ.. ಕೂಡಲೆ ಸರ್ಕಾರ ಅದೇಶ ವಾಪಾಸು ಹಿಂಪಡೆಯದಿದ್ದಲ್ಲಿ ಮತ್ತು ಅರ್ಚಕರ ಸಂಬಳವನ್ನು ಹೆಚ್ಚು ಮಾಡಬೇಕು. ಬಡ ದೇವಸ್ಥಾನಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಬೇಕು. ಮತ್ತು ನೋಟೀಸ್ ನೀಡಿದ ತಹಶಿಲ್ದಾರ್ ಅನ್ನು ವಜಾಗೋಳಿಸಬೇಕು ಎಂದು ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು