10:05 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ,

25/05/2021, 15:19

ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ

ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾದ 3ನೇ ಅಲೆ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತದೆ ಅಂತೇನಿಲ್ಲ ಎಂದು  ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ( ಐಎಪಿ) ಈ ಮುನ್ನ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ರಣದೀಪ್ ಗುಲೇರಿಯಾ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ಕೊರೊನಾ ಸೋಂಕಿನ ಅಂಕಿ ಅಂಶಗಳನ್ನು ಅವಲೋಕಿಸಿದರೆ ಮಕ್ಕಳ ಮೇಲೆ ಪರಿಣಾಮ ಬೀರಿದ್ದು ತುಂಬಾ ಕಡಿಮೆ. ಒಂದು ವೇಳೆ ಕೊರೊನಾ ಬಂದರೂ ಹೆಚ್ಚು ಹಾನಿಯುಂಟು ಮಾಡಿಲ್ಲ. ಹೀಗಾಗಿ 3ನೇ ಅಲೆ ಮಕ್ಕಳ ಮೇಲೆ ಸವಾರಿ ಮಾಡುತ್ತದೆ ಅನ್ನೋ ಯಾವುದೇ ಸೂಚನೆ ಇಲ್ಲ ಅಂತಾ ಗುಲೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು