3:25 PM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ,

25/05/2021, 15:19

ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ

ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾದ 3ನೇ ಅಲೆ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತದೆ ಅಂತೇನಿಲ್ಲ ಎಂದು  ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ( ಐಎಪಿ) ಈ ಮುನ್ನ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ರಣದೀಪ್ ಗುಲೇರಿಯಾ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ಕೊರೊನಾ ಸೋಂಕಿನ ಅಂಕಿ ಅಂಶಗಳನ್ನು ಅವಲೋಕಿಸಿದರೆ ಮಕ್ಕಳ ಮೇಲೆ ಪರಿಣಾಮ ಬೀರಿದ್ದು ತುಂಬಾ ಕಡಿಮೆ. ಒಂದು ವೇಳೆ ಕೊರೊನಾ ಬಂದರೂ ಹೆಚ್ಚು ಹಾನಿಯುಂಟು ಮಾಡಿಲ್ಲ. ಹೀಗಾಗಿ 3ನೇ ಅಲೆ ಮಕ್ಕಳ ಮೇಲೆ ಸವಾರಿ ಮಾಡುತ್ತದೆ ಅನ್ನೋ ಯಾವುದೇ ಸೂಚನೆ ಇಲ್ಲ ಅಂತಾ ಗುಲೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು