4:54 PM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ,

25/05/2021, 15:19

ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ

ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾದ 3ನೇ ಅಲೆ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತದೆ ಅಂತೇನಿಲ್ಲ ಎಂದು  ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ( ಐಎಪಿ) ಈ ಮುನ್ನ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ರಣದೀಪ್ ಗುಲೇರಿಯಾ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ಕೊರೊನಾ ಸೋಂಕಿನ ಅಂಕಿ ಅಂಶಗಳನ್ನು ಅವಲೋಕಿಸಿದರೆ ಮಕ್ಕಳ ಮೇಲೆ ಪರಿಣಾಮ ಬೀರಿದ್ದು ತುಂಬಾ ಕಡಿಮೆ. ಒಂದು ವೇಳೆ ಕೊರೊನಾ ಬಂದರೂ ಹೆಚ್ಚು ಹಾನಿಯುಂಟು ಮಾಡಿಲ್ಲ. ಹೀಗಾಗಿ 3ನೇ ಅಲೆ ಮಕ್ಕಳ ಮೇಲೆ ಸವಾರಿ ಮಾಡುತ್ತದೆ ಅನ್ನೋ ಯಾವುದೇ ಸೂಚನೆ ಇಲ್ಲ ಅಂತಾ ಗುಲೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು