9:37 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ,

25/05/2021, 15:19

ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ

ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾದ 3ನೇ ಅಲೆ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತದೆ ಅಂತೇನಿಲ್ಲ ಎಂದು  ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ( ಐಎಪಿ) ಈ ಮುನ್ನ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ರಣದೀಪ್ ಗುಲೇರಿಯಾ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ಕೊರೊನಾ ಸೋಂಕಿನ ಅಂಕಿ ಅಂಶಗಳನ್ನು ಅವಲೋಕಿಸಿದರೆ ಮಕ್ಕಳ ಮೇಲೆ ಪರಿಣಾಮ ಬೀರಿದ್ದು ತುಂಬಾ ಕಡಿಮೆ. ಒಂದು ವೇಳೆ ಕೊರೊನಾ ಬಂದರೂ ಹೆಚ್ಚು ಹಾನಿಯುಂಟು ಮಾಡಿಲ್ಲ. ಹೀಗಾಗಿ 3ನೇ ಅಲೆ ಮಕ್ಕಳ ಮೇಲೆ ಸವಾರಿ ಮಾಡುತ್ತದೆ ಅನ್ನೋ ಯಾವುದೇ ಸೂಚನೆ ಇಲ್ಲ ಅಂತಾ ಗುಲೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು