8:41 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ,

25/05/2021, 15:19

ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ

ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾದ 3ನೇ ಅಲೆ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತದೆ ಅಂತೇನಿಲ್ಲ ಎಂದು  ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ( ಐಎಪಿ) ಈ ಮುನ್ನ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ರಣದೀಪ್ ಗುಲೇರಿಯಾ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ಕೊರೊನಾ ಸೋಂಕಿನ ಅಂಕಿ ಅಂಶಗಳನ್ನು ಅವಲೋಕಿಸಿದರೆ ಮಕ್ಕಳ ಮೇಲೆ ಪರಿಣಾಮ ಬೀರಿದ್ದು ತುಂಬಾ ಕಡಿಮೆ. ಒಂದು ವೇಳೆ ಕೊರೊನಾ ಬಂದರೂ ಹೆಚ್ಚು ಹಾನಿಯುಂಟು ಮಾಡಿಲ್ಲ. ಹೀಗಾಗಿ 3ನೇ ಅಲೆ ಮಕ್ಕಳ ಮೇಲೆ ಸವಾರಿ ಮಾಡುತ್ತದೆ ಅನ್ನೋ ಯಾವುದೇ ಸೂಚನೆ ಇಲ್ಲ ಅಂತಾ ಗುಲೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು