4:16 AM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ,

25/05/2021, 15:19

ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ

ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾದ 3ನೇ ಅಲೆ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತದೆ ಅಂತೇನಿಲ್ಲ ಎಂದು  ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ( ಐಎಪಿ) ಈ ಮುನ್ನ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ರಣದೀಪ್ ಗುಲೇರಿಯಾ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ಕೊರೊನಾ ಸೋಂಕಿನ ಅಂಕಿ ಅಂಶಗಳನ್ನು ಅವಲೋಕಿಸಿದರೆ ಮಕ್ಕಳ ಮೇಲೆ ಪರಿಣಾಮ ಬೀರಿದ್ದು ತುಂಬಾ ಕಡಿಮೆ. ಒಂದು ವೇಳೆ ಕೊರೊನಾ ಬಂದರೂ ಹೆಚ್ಚು ಹಾನಿಯುಂಟು ಮಾಡಿಲ್ಲ. ಹೀಗಾಗಿ 3ನೇ ಅಲೆ ಮಕ್ಕಳ ಮೇಲೆ ಸವಾರಿ ಮಾಡುತ್ತದೆ ಅನ್ನೋ ಯಾವುದೇ ಸೂಚನೆ ಇಲ್ಲ ಅಂತಾ ಗುಲೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು