10:19 AM Tuesday28 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಕೋವಿಡ್ ಹಗರಣದ ಕುರಿತು ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ: ಯಡಿಯೂರಪ್ಪ

09/11/2024, 18:09

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೋವಿಡ್ ಹಗರಣದ ಕುರಿತು ಸರಕಾರ ಪ್ರಾಸಿಕ್ಯೂಶನ್ ಅನುಮತಿಗೆ ಶಿಫಾರಸು ಮಾಡಿರುವುದರ ಹಿಂದೆ ರಾಜಕೀಯ ‌ದುರುದ್ದೇಶವಿದೆ‌ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು‌.
ತೋರಣಗಲ್‌‌ನಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾವು ಯಾವ ಹಗರಣವನ್ನೂ‌ ಮಾಡಿಲ್ಲ. ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಮಾಡಿದ್ದೇವೆ. ಯಾವ ತನಿಖೆಗೂ ಬೇಕಿದ್ದರೆ ಕೊಡಲಿ ಎಂದ ಯಡಿಯೂರಪ್ಪ, ರಾಜ್ಯದ ಮೂರು ಕ್ಷೇತ್ರಗಳಲ್ಲಿ ‌ನಿರೀಕ್ಷೆ ಮೀರಿ ಜನ ಬೆಂಬಲ ಸಿಗುತ್ತಿದೆ. ಮೋದಿ ಅವರ ಅಪಾರ ಪ್ರಭಾವ ಕೆಲಸ‌ ಮಾಡಲಿದೆ. ಮೂರಕ್ಕೂ ಮೂರು ಕ್ಷೇತ್ರದಲ್ಲಿ ಗೆಲುವು ಸಿಗಲಿದೆ ಎನ್ನುವ ವಿಶ್ವಾಸವಿದೆ. ನನ್ನ ಅಧಿಕಾರ ಅವಧಿಯಲ್ಲಿ ‌ಯಾವ ಹಗರಣವೂ‌ ನಡೆದಿಲ್ಲ. ಎಲ್ಲವೂ ಕಾನೂನು ಚೌಕಟ್ಟಿನಲ್ಲಿ ಅನುಷ್ಠಾನ ಮಾಡಿದ್ದೇವೆ. ದುರುದ್ದೇಶ‌‌ ಪೂರಕವಾಗಿ ಕೇಸ್ ದಾಖಲಿಸುವುದು,‌ ವಿಚಾರಣೆಗೆ ಅನುಮತಿ ‌ನೀಡುವುದು ನಡೆದಿದೆ ಎಂದರು.
ಶ್ರೀರಾಮುಲು ಕೋವಿಡ್ ನಲ್ಲಿ ‌ಯಾವುದೇ ಹಗರಣ ಮಾಡಿಲ್ಲ. ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸೋಲುವ ಭೀತಿ‌ ಶುರುವಾಗಿದೆ. ಇಡೀ ಕ್ಯಾಬಿನೆಟ್ ‌ಜತೆ ಇಲ್ಲೆ ಕುಳಿತ್ತಿದ್ದಾರೆ.ರಾಮುಲು ಮೇಲೂ‌ ದುರುದ್ದೇಶ ಪೂರ್ವಕ ಪ್ರಾಸಿಕ್ಯೂಶನ್ ಅನುಮತಿ ‌ನೀಡಿದ್ದಾರೆ ಎಂದು

ಇತ್ತೀಚಿನ ಸುದ್ದಿ

ಜಾಹೀರಾತು