5:25 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ಕೋವಿಡ್ ಹಗರಣದ ಕುರಿತು ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ: ಯಡಿಯೂರಪ್ಪ

09/11/2024, 18:09

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೋವಿಡ್ ಹಗರಣದ ಕುರಿತು ಸರಕಾರ ಪ್ರಾಸಿಕ್ಯೂಶನ್ ಅನುಮತಿಗೆ ಶಿಫಾರಸು ಮಾಡಿರುವುದರ ಹಿಂದೆ ರಾಜಕೀಯ ‌ದುರುದ್ದೇಶವಿದೆ‌ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು‌.
ತೋರಣಗಲ್‌‌ನಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾವು ಯಾವ ಹಗರಣವನ್ನೂ‌ ಮಾಡಿಲ್ಲ. ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಮಾಡಿದ್ದೇವೆ. ಯಾವ ತನಿಖೆಗೂ ಬೇಕಿದ್ದರೆ ಕೊಡಲಿ ಎಂದ ಯಡಿಯೂರಪ್ಪ, ರಾಜ್ಯದ ಮೂರು ಕ್ಷೇತ್ರಗಳಲ್ಲಿ ‌ನಿರೀಕ್ಷೆ ಮೀರಿ ಜನ ಬೆಂಬಲ ಸಿಗುತ್ತಿದೆ. ಮೋದಿ ಅವರ ಅಪಾರ ಪ್ರಭಾವ ಕೆಲಸ‌ ಮಾಡಲಿದೆ. ಮೂರಕ್ಕೂ ಮೂರು ಕ್ಷೇತ್ರದಲ್ಲಿ ಗೆಲುವು ಸಿಗಲಿದೆ ಎನ್ನುವ ವಿಶ್ವಾಸವಿದೆ. ನನ್ನ ಅಧಿಕಾರ ಅವಧಿಯಲ್ಲಿ ‌ಯಾವ ಹಗರಣವೂ‌ ನಡೆದಿಲ್ಲ. ಎಲ್ಲವೂ ಕಾನೂನು ಚೌಕಟ್ಟಿನಲ್ಲಿ ಅನುಷ್ಠಾನ ಮಾಡಿದ್ದೇವೆ. ದುರುದ್ದೇಶ‌‌ ಪೂರಕವಾಗಿ ಕೇಸ್ ದಾಖಲಿಸುವುದು,‌ ವಿಚಾರಣೆಗೆ ಅನುಮತಿ ‌ನೀಡುವುದು ನಡೆದಿದೆ ಎಂದರು.
ಶ್ರೀರಾಮುಲು ಕೋವಿಡ್ ನಲ್ಲಿ ‌ಯಾವುದೇ ಹಗರಣ ಮಾಡಿಲ್ಲ. ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸೋಲುವ ಭೀತಿ‌ ಶುರುವಾಗಿದೆ. ಇಡೀ ಕ್ಯಾಬಿನೆಟ್ ‌ಜತೆ ಇಲ್ಲೆ ಕುಳಿತ್ತಿದ್ದಾರೆ.ರಾಮುಲು ಮೇಲೂ‌ ದುರುದ್ದೇಶ ಪೂರ್ವಕ ಪ್ರಾಸಿಕ್ಯೂಶನ್ ಅನುಮತಿ ‌ನೀಡಿದ್ದಾರೆ ಎಂದು

ಇತ್ತೀಚಿನ ಸುದ್ದಿ

ಜಾಹೀರಾತು