6:05 AM Wednesday3 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು…

ಇತ್ತೀಚಿನ ಸುದ್ದಿ

ಕೋವಿಡ್ ಹಗರಣದ ಕುರಿತು ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ: ಯಡಿಯೂರಪ್ಪ

09/11/2024, 18:09

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೋವಿಡ್ ಹಗರಣದ ಕುರಿತು ಸರಕಾರ ಪ್ರಾಸಿಕ್ಯೂಶನ್ ಅನುಮತಿಗೆ ಶಿಫಾರಸು ಮಾಡಿರುವುದರ ಹಿಂದೆ ರಾಜಕೀಯ ‌ದುರುದ್ದೇಶವಿದೆ‌ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು‌.
ತೋರಣಗಲ್‌‌ನಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾವು ಯಾವ ಹಗರಣವನ್ನೂ‌ ಮಾಡಿಲ್ಲ. ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಮಾಡಿದ್ದೇವೆ. ಯಾವ ತನಿಖೆಗೂ ಬೇಕಿದ್ದರೆ ಕೊಡಲಿ ಎಂದ ಯಡಿಯೂರಪ್ಪ, ರಾಜ್ಯದ ಮೂರು ಕ್ಷೇತ್ರಗಳಲ್ಲಿ ‌ನಿರೀಕ್ಷೆ ಮೀರಿ ಜನ ಬೆಂಬಲ ಸಿಗುತ್ತಿದೆ. ಮೋದಿ ಅವರ ಅಪಾರ ಪ್ರಭಾವ ಕೆಲಸ‌ ಮಾಡಲಿದೆ. ಮೂರಕ್ಕೂ ಮೂರು ಕ್ಷೇತ್ರದಲ್ಲಿ ಗೆಲುವು ಸಿಗಲಿದೆ ಎನ್ನುವ ವಿಶ್ವಾಸವಿದೆ. ನನ್ನ ಅಧಿಕಾರ ಅವಧಿಯಲ್ಲಿ ‌ಯಾವ ಹಗರಣವೂ‌ ನಡೆದಿಲ್ಲ. ಎಲ್ಲವೂ ಕಾನೂನು ಚೌಕಟ್ಟಿನಲ್ಲಿ ಅನುಷ್ಠಾನ ಮಾಡಿದ್ದೇವೆ. ದುರುದ್ದೇಶ‌‌ ಪೂರಕವಾಗಿ ಕೇಸ್ ದಾಖಲಿಸುವುದು,‌ ವಿಚಾರಣೆಗೆ ಅನುಮತಿ ‌ನೀಡುವುದು ನಡೆದಿದೆ ಎಂದರು.
ಶ್ರೀರಾಮುಲು ಕೋವಿಡ್ ನಲ್ಲಿ ‌ಯಾವುದೇ ಹಗರಣ ಮಾಡಿಲ್ಲ. ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸೋಲುವ ಭೀತಿ‌ ಶುರುವಾಗಿದೆ. ಇಡೀ ಕ್ಯಾಬಿನೆಟ್ ‌ಜತೆ ಇಲ್ಲೆ ಕುಳಿತ್ತಿದ್ದಾರೆ.ರಾಮುಲು ಮೇಲೂ‌ ದುರುದ್ದೇಶ ಪೂರ್ವಕ ಪ್ರಾಸಿಕ್ಯೂಶನ್ ಅನುಮತಿ ‌ನೀಡಿದ್ದಾರೆ ಎಂದು

ಇತ್ತೀಚಿನ ಸುದ್ದಿ

ಜಾಹೀರಾತು