3:00 AM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಕೋವಿಡ್ ಹಗರಣದ ಕುರಿತು ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ: ಯಡಿಯೂರಪ್ಪ

09/11/2024, 18:09

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೋವಿಡ್ ಹಗರಣದ ಕುರಿತು ಸರಕಾರ ಪ್ರಾಸಿಕ್ಯೂಶನ್ ಅನುಮತಿಗೆ ಶಿಫಾರಸು ಮಾಡಿರುವುದರ ಹಿಂದೆ ರಾಜಕೀಯ ‌ದುರುದ್ದೇಶವಿದೆ‌ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು‌.
ತೋರಣಗಲ್‌‌ನಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾವು ಯಾವ ಹಗರಣವನ್ನೂ‌ ಮಾಡಿಲ್ಲ. ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಮಾಡಿದ್ದೇವೆ. ಯಾವ ತನಿಖೆಗೂ ಬೇಕಿದ್ದರೆ ಕೊಡಲಿ ಎಂದ ಯಡಿಯೂರಪ್ಪ, ರಾಜ್ಯದ ಮೂರು ಕ್ಷೇತ್ರಗಳಲ್ಲಿ ‌ನಿರೀಕ್ಷೆ ಮೀರಿ ಜನ ಬೆಂಬಲ ಸಿಗುತ್ತಿದೆ. ಮೋದಿ ಅವರ ಅಪಾರ ಪ್ರಭಾವ ಕೆಲಸ‌ ಮಾಡಲಿದೆ. ಮೂರಕ್ಕೂ ಮೂರು ಕ್ಷೇತ್ರದಲ್ಲಿ ಗೆಲುವು ಸಿಗಲಿದೆ ಎನ್ನುವ ವಿಶ್ವಾಸವಿದೆ. ನನ್ನ ಅಧಿಕಾರ ಅವಧಿಯಲ್ಲಿ ‌ಯಾವ ಹಗರಣವೂ‌ ನಡೆದಿಲ್ಲ. ಎಲ್ಲವೂ ಕಾನೂನು ಚೌಕಟ್ಟಿನಲ್ಲಿ ಅನುಷ್ಠಾನ ಮಾಡಿದ್ದೇವೆ. ದುರುದ್ದೇಶ‌‌ ಪೂರಕವಾಗಿ ಕೇಸ್ ದಾಖಲಿಸುವುದು,‌ ವಿಚಾರಣೆಗೆ ಅನುಮತಿ ‌ನೀಡುವುದು ನಡೆದಿದೆ ಎಂದರು.
ಶ್ರೀರಾಮುಲು ಕೋವಿಡ್ ನಲ್ಲಿ ‌ಯಾವುದೇ ಹಗರಣ ಮಾಡಿಲ್ಲ. ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸೋಲುವ ಭೀತಿ‌ ಶುರುವಾಗಿದೆ. ಇಡೀ ಕ್ಯಾಬಿನೆಟ್ ‌ಜತೆ ಇಲ್ಲೆ ಕುಳಿತ್ತಿದ್ದಾರೆ.ರಾಮುಲು ಮೇಲೂ‌ ದುರುದ್ದೇಶ ಪೂರ್ವಕ ಪ್ರಾಸಿಕ್ಯೂಶನ್ ಅನುಮತಿ ‌ನೀಡಿದ್ದಾರೆ ಎಂದು

ಇತ್ತೀಚಿನ ಸುದ್ದಿ

ಜಾಹೀರಾತು