3:53 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ದೇವೇಗೌಡ ಕುಟುಂಬ ಬಗ್ಗೆ ಅವಹೇಳನ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ವಿರುದ್ಧ ಯುವ ಜೆಡಿಎಸ್ ಪ್ರದರ್ಶನ

31/01/2023, 20:23

ಮಂಗಳೂರು(reporterkarnataka.com): ಮಾಜಿ ಪ್ರಧಾನಿ, ಜನತಾ ದಳ ಹಿರಿಯ ನಾಯಕ ಎಚ್. ಡಿ. ದೇವೇಗೌಡರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ದ ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ನಗರದ ಸರ್ಕಿಟ್ ಹೌಸ್ ಬಳಿ ಮುತ್ತಿಗೆ ಹಾಕಿ ಕಪ್ಪು ಬಾವುಟವನ್ನು ಪ್ರದರ್ಶಿಸಲಾಯಿತು.
ನಂತರ ಮಾತನಾಡಿದ ಅಕ್ಷಿತ್ ಸುವರ್ಣ ಅವರು,
ದೇಶದ ಪ್ರಧಾನಿ ಆಗಿ ದೇವೇಗೌಡರು ನೀಡಿರುವ ಕೊಡುಗೆಯನ್ನು ನಳಿನ್ ಮರೆತಿರಬಹುದು. ಆದರೆ, ದೇಶದ ಜನರು ಮರೆತಿಲ್ಲ. ರಾಜ್ಯದ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿರುವ ದೇವೇಗೌಡರ ಬಗ್ಗೆ ಕೀಳಾಗಿ ಮಾತನಾಡಿರುವ ನಳಿನ್ ಕುಮಾರ್ ಕಟೀಲ್ ಅವರ ವರ್ತನೆ ಖಂಡನೀಯ ಎಂದರು.
ರಾಜಕೀಯದಲ್ಲಿ ತಮ್ಮದೇ ಕೊಡುಗೆ ನೀಡಿರುವ ದೇವೇಗೌಡರ ಕುಟುಂಬ ಹಾಗೂ ಜೆಡಿಎಸ್ ಪಕ್ಷದ ವಿರುದ್ದ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ದೇವೆಗೌಡರ ಕೊಡುಗೆ ಕನಿಷ್ಠ ಒಂದು ಪಾಲು ಸೇವೆಯನ್ನು ನೀಡದ ಇವರಿಗೆ ಗೌಡರ ಕುಟುಂಬದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ನುಡಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಶಾಸಕರನ್ನು ಖರೀದಿ ಮಾಡಿ ಅನೈತಿಕವಾಗಿ ಸರಕಾರ ರಚನೆ ಮಾಡಿದ್ದು ಬಿಟ್ಟರೆ ಇವರ ಸಾಧನೆ ಬೇರೆ ಏನು ಇಲ್ಲ. ಕೂಡಲೇ ಅವರು ದೇವೆಗೌಡರ ಕ್ಷಮೆಯನ್ನು ಯಾಚಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅವರು ಭಾಗವಹಿಸುವ ಎಲ್ಲಾ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು
ಅಕ್ಷಿತ್ ಸುವರ್ಣ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಯುವ ಜಿಲ್ಲಾ ಜೆಡಿಎಸ್ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ಹಾಗೂ ಜಿಲ್ಲಾ ಸಂಘಟನಾ ಉಸ್ತುವಾರಿ ರತೀಶ್ ಕರ್ಕೇರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು, ಯುವ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ವಿನಯ್, ಗೌತಮ್, ವಿನಿತ್, ರಿನಿತ್, ನಿಶಾಂತ್, ಗಗಾಣೀಶ್ ,ಪ್ರದೀಪ್ ಕೀರ್ತಿಕ್, ಪವನ್, ಧನುಷ್, ಸುಶಾಂತ್, ವಿನಯ್ ,ಜಯದೀಪ್ ಧನುಷ್ ಪೂಜಾರಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು