12:32 PM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಎಳ್ಳಾರೆಯ ಸದಾಶಿವ ಪ್ರಭುಗೆ ಐಎಎಸ್ ಗ್ರೇಡ್:ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅಧಿಕಾರಿ!

10/08/2022, 10:52

ಕಾರ್ಕಳ(reporterkarnataka.com): ಉಡುಪಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಎಳ್ಳಾರೆ ಸದಾಶಿವ ಪ್ರಭು ಅವರು  ಐಎಎಸ್ ಅಧಿಕಾರಿಯಾಗಿ ಪದೋನ್ನತಿ ಪಡೆದಿದ್ದಾರೆ. ದೇಶದ 75 ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರಕಾರವು ಅಧಿಸೂಚನೆ ಹೊರಡಿಸಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಳ್ಳಾರೆಯ ಬಿ. ಸದಾಶಿವ ಪ್ರಭು ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಳಿಕ ಕಿರಿಯ ವಾರಂಟ್ ಅಧಿಕಾರಿಯಾಗಿ ನಿವೃತ್ತಿ ಹೊಂದಿದರು. ನಂತರ , 2005ರಲ್ಲಿ ಮಂಗಳೂರಿನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ  ನೇಮಕಾತಿ ಹೊಂದಿದರು. 2006 ಬ್ಯಾಚ್ ನ  ಕೆಎಎಸ್ ಪರೀಕ್ಷೆಯಲ್ಲಿ ಉತೀರ್ಣರಾಗಿ, 2008ರಲ್ಲಿ ಸಹಾಯಕ ಅಯುಕ್ತರಾಗಿ  ಕೆಎಎಸ್ ಸೇವೆಗೆ ಸೇರ್ಪಡೆಗೊಂಡರು.   

ಬಿಜಾಪುರದಲ್ಲಿ ಪ್ರಾಯೋಗಿಕ ತರಬೇತಿ ಮುಗಿಸಿದ ಬಳಿಕ ಅವಿಭಾಜಿತ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹಾಯಕ ಕಮಿಷನರ್ ಅಗಿ  ,ಬಳಿಕ ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದರು. ನಂತರ ಕರ್ನಾಟಕ ಸರಕಾರದ ಕಂದಾಯ ಇಲಾಖೆಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಬಳಿಕ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು