12:10 PM Wednesday4 - February 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್

ಇತ್ತೀಚಿನ ಸುದ್ದಿ

ಎಳ್ಳಾರೆಯ ಸದಾಶಿವ ಪ್ರಭುಗೆ ಐಎಎಸ್ ಗ್ರೇಡ್:ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅಧಿಕಾರಿ!

10/08/2022, 10:52

ಕಾರ್ಕಳ(reporterkarnataka.com): ಉಡುಪಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಎಳ್ಳಾರೆ ಸದಾಶಿವ ಪ್ರಭು ಅವರು  ಐಎಎಸ್ ಅಧಿಕಾರಿಯಾಗಿ ಪದೋನ್ನತಿ ಪಡೆದಿದ್ದಾರೆ. ದೇಶದ 75 ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರಕಾರವು ಅಧಿಸೂಚನೆ ಹೊರಡಿಸಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಳ್ಳಾರೆಯ ಬಿ. ಸದಾಶಿವ ಪ್ರಭು ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಳಿಕ ಕಿರಿಯ ವಾರಂಟ್ ಅಧಿಕಾರಿಯಾಗಿ ನಿವೃತ್ತಿ ಹೊಂದಿದರು. ನಂತರ , 2005ರಲ್ಲಿ ಮಂಗಳೂರಿನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ  ನೇಮಕಾತಿ ಹೊಂದಿದರು. 2006 ಬ್ಯಾಚ್ ನ  ಕೆಎಎಸ್ ಪರೀಕ್ಷೆಯಲ್ಲಿ ಉತೀರ್ಣರಾಗಿ, 2008ರಲ್ಲಿ ಸಹಾಯಕ ಅಯುಕ್ತರಾಗಿ  ಕೆಎಎಸ್ ಸೇವೆಗೆ ಸೇರ್ಪಡೆಗೊಂಡರು.   

ಬಿಜಾಪುರದಲ್ಲಿ ಪ್ರಾಯೋಗಿಕ ತರಬೇತಿ ಮುಗಿಸಿದ ಬಳಿಕ ಅವಿಭಾಜಿತ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹಾಯಕ ಕಮಿಷನರ್ ಅಗಿ  ,ಬಳಿಕ ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದರು. ನಂತರ ಕರ್ನಾಟಕ ಸರಕಾರದ ಕಂದಾಯ ಇಲಾಖೆಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಬಳಿಕ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು