2:50 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಎಳ್ಳಾರೆಯ ಸದಾಶಿವ ಪ್ರಭುಗೆ ಐಎಎಸ್ ಗ್ರೇಡ್:ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅಧಿಕಾರಿ!

10/08/2022, 10:52

ಕಾರ್ಕಳ(reporterkarnataka.com): ಉಡುಪಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಎಳ್ಳಾರೆ ಸದಾಶಿವ ಪ್ರಭು ಅವರು  ಐಎಎಸ್ ಅಧಿಕಾರಿಯಾಗಿ ಪದೋನ್ನತಿ ಪಡೆದಿದ್ದಾರೆ. ದೇಶದ 75 ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರಕಾರವು ಅಧಿಸೂಚನೆ ಹೊರಡಿಸಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಳ್ಳಾರೆಯ ಬಿ. ಸದಾಶಿವ ಪ್ರಭು ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಳಿಕ ಕಿರಿಯ ವಾರಂಟ್ ಅಧಿಕಾರಿಯಾಗಿ ನಿವೃತ್ತಿ ಹೊಂದಿದರು. ನಂತರ , 2005ರಲ್ಲಿ ಮಂಗಳೂರಿನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ  ನೇಮಕಾತಿ ಹೊಂದಿದರು. 2006 ಬ್ಯಾಚ್ ನ  ಕೆಎಎಸ್ ಪರೀಕ್ಷೆಯಲ್ಲಿ ಉತೀರ್ಣರಾಗಿ, 2008ರಲ್ಲಿ ಸಹಾಯಕ ಅಯುಕ್ತರಾಗಿ  ಕೆಎಎಸ್ ಸೇವೆಗೆ ಸೇರ್ಪಡೆಗೊಂಡರು.   

ಬಿಜಾಪುರದಲ್ಲಿ ಪ್ರಾಯೋಗಿಕ ತರಬೇತಿ ಮುಗಿಸಿದ ಬಳಿಕ ಅವಿಭಾಜಿತ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹಾಯಕ ಕಮಿಷನರ್ ಅಗಿ  ,ಬಳಿಕ ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದರು. ನಂತರ ಕರ್ನಾಟಕ ಸರಕಾರದ ಕಂದಾಯ ಇಲಾಖೆಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಬಳಿಕ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು