4:13 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಗುರುಪುರ: 1.50 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

25/01/2023, 22:40

ಸುರತ್ಕಲ್(reporterkarnataka.com): ಗುರುಪುರ ವ್ಯಾಪ್ತಿಯಲ್ಲಿ 1.40 ಕೋಟಿ ರೂಪಾಯಿ ಅನುದಾನದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು.
ಗುರುಪುರ ಪಂಚಾಯತ್ ವ್ಯಾಪ್ತಿಯ ಗುರುಪುರ ಸರ್ಕಾರಿ ಪದವಿಪೂರ್ವ ಕಾಲೇಜು ಸಮೀಪದ ರಸ್ತೆ, ಗುರುಪುರ ಕೈಕಂಬ ಸಮೀಪದ ಕಂದಾವರ ಸಮೀಪ ನೂತನ ರಸ್ತೆಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು.
ಅಲ್ಲಿಂದ ಅಡ್ಡೂರು ಮುಖ್ಯಪ್ರಾಣ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ದೇಗುಲದ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಭರತ್ ಶೆಟ್ಟಿ ಅವರು, “ಗುರುಪುರ ವ್ಯಾಪ್ತಿಯಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದ್ದು, ಇದೀಗ ಒಂದು ಕೋಟಿ ನಲ್ವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಹಲವು ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಇನ್ನುಳಿದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು.


ಇದಕ್ಕಾಗಿ‌ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ. ಈಗಾಗಲೇ ಪೊಳಲಿಯಿಂದ ಕೈಕಂಬದವರೆಗೆ 5 ಕೋಟಿ ರೂ‌ ವೆಚ್ಚದಲ್ಲಿ ಕಾಮಗಾರಿ ಆರಂಭಗೊಂಡಿದ್ದು ಸದ್ಯದಲ್ಲೇ ಲೋಕಾರ್ಪಣೆಗೊಳಿಸಲಾಗುವುದು. ಇನ್ನೂ ಕೂಡಾ ಗುರುಪುರ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಗುತ್ತದೆ. ತಡೆಗೋಡೆಯಂತಹ ಸಣ್ಣಪುಟ್ಟ ಕಾಮಗಾರಿ, ಸಣ್ಣ ಸಣ್ಣ ರಸ್ತೆಗಳನ್ನು ಅಭಿವೃದ್ಧಿ ಗೊಳಿಸಲಾಗುವುದು” ಎಂದರು.
ಈ ಸಂದರ್ಭದಲ್ಲಿ‌ ಬಿಜೆಪಿ ಮುಖಂಡರಾದ ಸೋಹನ್ ಅತಿಕಾರಿ, ಶಕ್ತಿ ಕೇಂದ್ರ ಪ್ರಮುಖ್ ಶ್ರೀಕರ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಉದಯ್ ಭಟ್, ನಳಿನಿ ಶೆಟ್ಟಿ, ರಾಜೇಶ್ ಸುವರ್ಣ, ಸುನಿಲ್, ಬೂತ್ ಅಧ್ಯಕ್ಷ ರಾಜೇಶ್ ಶೆಟ್ಟಿ, ವಿನಯ್ ಸುವರ್ಣ, ಜಯರಾಮ್ ಪೂಜಾರಿ, ವಿನೋದ್ ಬರ್ಕೆ, ವಿಜಯ್ ಅಲಯಿಗುಡ್ಡೆ, ರೂಪೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು