3:14 AM Wednesday27 - May 2026
ಬ್ರೇಕಿಂಗ್ ನ್ಯೂಸ್
Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಗುರುಪುರ: 1.50 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

25/01/2023, 22:40

ಸುರತ್ಕಲ್(reporterkarnataka.com): ಗುರುಪುರ ವ್ಯಾಪ್ತಿಯಲ್ಲಿ 1.40 ಕೋಟಿ ರೂಪಾಯಿ ಅನುದಾನದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು.
ಗುರುಪುರ ಪಂಚಾಯತ್ ವ್ಯಾಪ್ತಿಯ ಗುರುಪುರ ಸರ್ಕಾರಿ ಪದವಿಪೂರ್ವ ಕಾಲೇಜು ಸಮೀಪದ ರಸ್ತೆ, ಗುರುಪುರ ಕೈಕಂಬ ಸಮೀಪದ ಕಂದಾವರ ಸಮೀಪ ನೂತನ ರಸ್ತೆಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು.
ಅಲ್ಲಿಂದ ಅಡ್ಡೂರು ಮುಖ್ಯಪ್ರಾಣ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ದೇಗುಲದ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಭರತ್ ಶೆಟ್ಟಿ ಅವರು, “ಗುರುಪುರ ವ್ಯಾಪ್ತಿಯಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದ್ದು, ಇದೀಗ ಒಂದು ಕೋಟಿ ನಲ್ವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಹಲವು ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಇನ್ನುಳಿದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು.


ಇದಕ್ಕಾಗಿ‌ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ. ಈಗಾಗಲೇ ಪೊಳಲಿಯಿಂದ ಕೈಕಂಬದವರೆಗೆ 5 ಕೋಟಿ ರೂ‌ ವೆಚ್ಚದಲ್ಲಿ ಕಾಮಗಾರಿ ಆರಂಭಗೊಂಡಿದ್ದು ಸದ್ಯದಲ್ಲೇ ಲೋಕಾರ್ಪಣೆಗೊಳಿಸಲಾಗುವುದು. ಇನ್ನೂ ಕೂಡಾ ಗುರುಪುರ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಗುತ್ತದೆ. ತಡೆಗೋಡೆಯಂತಹ ಸಣ್ಣಪುಟ್ಟ ಕಾಮಗಾರಿ, ಸಣ್ಣ ಸಣ್ಣ ರಸ್ತೆಗಳನ್ನು ಅಭಿವೃದ್ಧಿ ಗೊಳಿಸಲಾಗುವುದು” ಎಂದರು.
ಈ ಸಂದರ್ಭದಲ್ಲಿ‌ ಬಿಜೆಪಿ ಮುಖಂಡರಾದ ಸೋಹನ್ ಅತಿಕಾರಿ, ಶಕ್ತಿ ಕೇಂದ್ರ ಪ್ರಮುಖ್ ಶ್ರೀಕರ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಉದಯ್ ಭಟ್, ನಳಿನಿ ಶೆಟ್ಟಿ, ರಾಜೇಶ್ ಸುವರ್ಣ, ಸುನಿಲ್, ಬೂತ್ ಅಧ್ಯಕ್ಷ ರಾಜೇಶ್ ಶೆಟ್ಟಿ, ವಿನಯ್ ಸುವರ್ಣ, ಜಯರಾಮ್ ಪೂಜಾರಿ, ವಿನೋದ್ ಬರ್ಕೆ, ವಿಜಯ್ ಅಲಯಿಗುಡ್ಡೆ, ರೂಪೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು