11:12 AM Saturday6 - June 2026
ಬ್ರೇಕಿಂಗ್ ನ್ಯೂಸ್
ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ

ಇತ್ತೀಚಿನ ಸುದ್ದಿ

ಗುರುಪುರ: 1.50 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

25/01/2023, 22:40

ಸುರತ್ಕಲ್(reporterkarnataka.com): ಗುರುಪುರ ವ್ಯಾಪ್ತಿಯಲ್ಲಿ 1.40 ಕೋಟಿ ರೂಪಾಯಿ ಅನುದಾನದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು.
ಗುರುಪುರ ಪಂಚಾಯತ್ ವ್ಯಾಪ್ತಿಯ ಗುರುಪುರ ಸರ್ಕಾರಿ ಪದವಿಪೂರ್ವ ಕಾಲೇಜು ಸಮೀಪದ ರಸ್ತೆ, ಗುರುಪುರ ಕೈಕಂಬ ಸಮೀಪದ ಕಂದಾವರ ಸಮೀಪ ನೂತನ ರಸ್ತೆಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು.
ಅಲ್ಲಿಂದ ಅಡ್ಡೂರು ಮುಖ್ಯಪ್ರಾಣ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ದೇಗುಲದ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಭರತ್ ಶೆಟ್ಟಿ ಅವರು, “ಗುರುಪುರ ವ್ಯಾಪ್ತಿಯಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದ್ದು, ಇದೀಗ ಒಂದು ಕೋಟಿ ನಲ್ವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಹಲವು ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಇನ್ನುಳಿದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು.


ಇದಕ್ಕಾಗಿ‌ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ. ಈಗಾಗಲೇ ಪೊಳಲಿಯಿಂದ ಕೈಕಂಬದವರೆಗೆ 5 ಕೋಟಿ ರೂ‌ ವೆಚ್ಚದಲ್ಲಿ ಕಾಮಗಾರಿ ಆರಂಭಗೊಂಡಿದ್ದು ಸದ್ಯದಲ್ಲೇ ಲೋಕಾರ್ಪಣೆಗೊಳಿಸಲಾಗುವುದು. ಇನ್ನೂ ಕೂಡಾ ಗುರುಪುರ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಗುತ್ತದೆ. ತಡೆಗೋಡೆಯಂತಹ ಸಣ್ಣಪುಟ್ಟ ಕಾಮಗಾರಿ, ಸಣ್ಣ ಸಣ್ಣ ರಸ್ತೆಗಳನ್ನು ಅಭಿವೃದ್ಧಿ ಗೊಳಿಸಲಾಗುವುದು” ಎಂದರು.
ಈ ಸಂದರ್ಭದಲ್ಲಿ‌ ಬಿಜೆಪಿ ಮುಖಂಡರಾದ ಸೋಹನ್ ಅತಿಕಾರಿ, ಶಕ್ತಿ ಕೇಂದ್ರ ಪ್ರಮುಖ್ ಶ್ರೀಕರ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಉದಯ್ ಭಟ್, ನಳಿನಿ ಶೆಟ್ಟಿ, ರಾಜೇಶ್ ಸುವರ್ಣ, ಸುನಿಲ್, ಬೂತ್ ಅಧ್ಯಕ್ಷ ರಾಜೇಶ್ ಶೆಟ್ಟಿ, ವಿನಯ್ ಸುವರ್ಣ, ಜಯರಾಮ್ ಪೂಜಾರಿ, ವಿನೋದ್ ಬರ್ಕೆ, ವಿಜಯ್ ಅಲಯಿಗುಡ್ಡೆ, ರೂಪೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು