1:02 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಹಕ್ಕುಪತ್ರ ನೀಡಲು ಹಿಂದೇಟು: ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಒಂಟಿ ಮೌನ ಪ್ರತಿಭಟನೆ

05/09/2023, 21:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಕ್ಕುಪತ್ರ ನೀಡಲು ಹಿಂದೇಟು ನೀತಿ ಅನುಸರಿಸುವುದನ್ನು ಪ್ರತಿಭಟಿಸಿ ಮೂಡಿಗೆರೆ ತಾಲ್ಲೂಕಿನ ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮೂಡಿಗೆರೆ ಮಿನಿ ವಿಧಾನಸೌಧದ ಎದುರು ಏಕಾಂಗಿಯಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ.


ಎರಡು ವರ್ಷಗಳಿಂದ ನಿಡುವಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರ್ಕಲ್ ನಿಡುವಳೆ ಗ್ರಾಮದ 70ಕ್ಕೂ ಹೆಚ್ಚು ಗ್ರಾಮಸ್ಥರು 94 ಸಿಯಲ್ಲಿ ಅರ್ಜಿ ಸಲ್ಲಿಸಿದ್ದು ಅದರಲ್ಲಿ 30 ಜನರು ಸರ್ಕಾರಕ್ಕೆ ಹಣವನ್ನು ಪಾವತಿ ಮಾಡಿದ್ದಾರೆ. ಆದರೆ ಮೂಡಿಗೆರೆ ತಹಶೀಲ್ದಾರ್ ಅವರು ಹಕ್ಕುಪತ್ರ ನೀಡಲು ಹಿಂದೇಟು ಹಾಕುತ್ತಿದ್ದು ಇದರಿಂದ ಬೇಸತ್ತು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿಯವರು ಮೌನ ಪ್ರತಿಭಟನೆ ಆರಂಭಿಸಿದ್ದಾರೆ. ಗ್ರಾಮ ಪಂಚಾಯತಿ ಉಪಾಧ್ಯಕ್ಷ ನವೀನ್ ಹಾವಳಿ ಮಾತನಾಡಿ ಈ ಭಾಗದಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸ ಮಾಡುತ್ತಿದ್ದು 94 ಸಿ ಅರ್ಜಿ ಸಲ್ಲಿಸಿ ಎರಡು ವರ್ಷ ಕಳೆದರೂ ಹಕ್ಕುಪತ್ರ ನೀಡದೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ. ಗ್ರಾಮಸ್ಥರು ಕಚೇರಿಗಳಿಗೆ ಅಲೆದು ಅಲೆದು ರೋಸಿ ಹೋಗಿದ್ದಾರೆ. ಇದರಿಂದ ಖುದ್ದಾಗಿ ನಾನೇ ಬಂದರು ಮೂಡಿಗೆರೆ ತಾಲೂಕು ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಅದರಿಂದ ಬೇಸತ್ತು ಮೌನ ಪ್ರತಿಭಟನೆ ಮಾಡುತ್ತಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು