1:45 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹಕ್ಕುಪತ್ರ ನೀಡಲು ಹಿಂದೇಟು: ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಒಂಟಿ ಮೌನ ಪ್ರತಿಭಟನೆ

05/09/2023, 21:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಕ್ಕುಪತ್ರ ನೀಡಲು ಹಿಂದೇಟು ನೀತಿ ಅನುಸರಿಸುವುದನ್ನು ಪ್ರತಿಭಟಿಸಿ ಮೂಡಿಗೆರೆ ತಾಲ್ಲೂಕಿನ ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮೂಡಿಗೆರೆ ಮಿನಿ ವಿಧಾನಸೌಧದ ಎದುರು ಏಕಾಂಗಿಯಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ.


ಎರಡು ವರ್ಷಗಳಿಂದ ನಿಡುವಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರ್ಕಲ್ ನಿಡುವಳೆ ಗ್ರಾಮದ 70ಕ್ಕೂ ಹೆಚ್ಚು ಗ್ರಾಮಸ್ಥರು 94 ಸಿಯಲ್ಲಿ ಅರ್ಜಿ ಸಲ್ಲಿಸಿದ್ದು ಅದರಲ್ಲಿ 30 ಜನರು ಸರ್ಕಾರಕ್ಕೆ ಹಣವನ್ನು ಪಾವತಿ ಮಾಡಿದ್ದಾರೆ. ಆದರೆ ಮೂಡಿಗೆರೆ ತಹಶೀಲ್ದಾರ್ ಅವರು ಹಕ್ಕುಪತ್ರ ನೀಡಲು ಹಿಂದೇಟು ಹಾಕುತ್ತಿದ್ದು ಇದರಿಂದ ಬೇಸತ್ತು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿಯವರು ಮೌನ ಪ್ರತಿಭಟನೆ ಆರಂಭಿಸಿದ್ದಾರೆ. ಗ್ರಾಮ ಪಂಚಾಯತಿ ಉಪಾಧ್ಯಕ್ಷ ನವೀನ್ ಹಾವಳಿ ಮಾತನಾಡಿ ಈ ಭಾಗದಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸ ಮಾಡುತ್ತಿದ್ದು 94 ಸಿ ಅರ್ಜಿ ಸಲ್ಲಿಸಿ ಎರಡು ವರ್ಷ ಕಳೆದರೂ ಹಕ್ಕುಪತ್ರ ನೀಡದೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ. ಗ್ರಾಮಸ್ಥರು ಕಚೇರಿಗಳಿಗೆ ಅಲೆದು ಅಲೆದು ರೋಸಿ ಹೋಗಿದ್ದಾರೆ. ಇದರಿಂದ ಖುದ್ದಾಗಿ ನಾನೇ ಬಂದರು ಮೂಡಿಗೆರೆ ತಾಲೂಕು ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಅದರಿಂದ ಬೇಸತ್ತು ಮೌನ ಪ್ರತಿಭಟನೆ ಮಾಡುತ್ತಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು