2:15 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಹಕ್ಕುಪತ್ರ ನೀಡಲು ಹಿಂದೇಟು: ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಒಂಟಿ ಮೌನ ಪ್ರತಿಭಟನೆ

05/09/2023, 21:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಕ್ಕುಪತ್ರ ನೀಡಲು ಹಿಂದೇಟು ನೀತಿ ಅನುಸರಿಸುವುದನ್ನು ಪ್ರತಿಭಟಿಸಿ ಮೂಡಿಗೆರೆ ತಾಲ್ಲೂಕಿನ ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮೂಡಿಗೆರೆ ಮಿನಿ ವಿಧಾನಸೌಧದ ಎದುರು ಏಕಾಂಗಿಯಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ.


ಎರಡು ವರ್ಷಗಳಿಂದ ನಿಡುವಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರ್ಕಲ್ ನಿಡುವಳೆ ಗ್ರಾಮದ 70ಕ್ಕೂ ಹೆಚ್ಚು ಗ್ರಾಮಸ್ಥರು 94 ಸಿಯಲ್ಲಿ ಅರ್ಜಿ ಸಲ್ಲಿಸಿದ್ದು ಅದರಲ್ಲಿ 30 ಜನರು ಸರ್ಕಾರಕ್ಕೆ ಹಣವನ್ನು ಪಾವತಿ ಮಾಡಿದ್ದಾರೆ. ಆದರೆ ಮೂಡಿಗೆರೆ ತಹಶೀಲ್ದಾರ್ ಅವರು ಹಕ್ಕುಪತ್ರ ನೀಡಲು ಹಿಂದೇಟು ಹಾಕುತ್ತಿದ್ದು ಇದರಿಂದ ಬೇಸತ್ತು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿಯವರು ಮೌನ ಪ್ರತಿಭಟನೆ ಆರಂಭಿಸಿದ್ದಾರೆ. ಗ್ರಾಮ ಪಂಚಾಯತಿ ಉಪಾಧ್ಯಕ್ಷ ನವೀನ್ ಹಾವಳಿ ಮಾತನಾಡಿ ಈ ಭಾಗದಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸ ಮಾಡುತ್ತಿದ್ದು 94 ಸಿ ಅರ್ಜಿ ಸಲ್ಲಿಸಿ ಎರಡು ವರ್ಷ ಕಳೆದರೂ ಹಕ್ಕುಪತ್ರ ನೀಡದೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ. ಗ್ರಾಮಸ್ಥರು ಕಚೇರಿಗಳಿಗೆ ಅಲೆದು ಅಲೆದು ರೋಸಿ ಹೋಗಿದ್ದಾರೆ. ಇದರಿಂದ ಖುದ್ದಾಗಿ ನಾನೇ ಬಂದರು ಮೂಡಿಗೆರೆ ತಾಲೂಕು ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಅದರಿಂದ ಬೇಸತ್ತು ಮೌನ ಪ್ರತಿಭಟನೆ ಮಾಡುತ್ತಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು