7:26 PM Tuesday18 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಹಕ್ಕುಪತ್ರ ನೀಡಲು ಹಿಂದೇಟು: ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಒಂಟಿ ಮೌನ ಪ್ರತಿಭಟನೆ

05/09/2023, 21:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಕ್ಕುಪತ್ರ ನೀಡಲು ಹಿಂದೇಟು ನೀತಿ ಅನುಸರಿಸುವುದನ್ನು ಪ್ರತಿಭಟಿಸಿ ಮೂಡಿಗೆರೆ ತಾಲ್ಲೂಕಿನ ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮೂಡಿಗೆರೆ ಮಿನಿ ವಿಧಾನಸೌಧದ ಎದುರು ಏಕಾಂಗಿಯಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ.


ಎರಡು ವರ್ಷಗಳಿಂದ ನಿಡುವಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರ್ಕಲ್ ನಿಡುವಳೆ ಗ್ರಾಮದ 70ಕ್ಕೂ ಹೆಚ್ಚು ಗ್ರಾಮಸ್ಥರು 94 ಸಿಯಲ್ಲಿ ಅರ್ಜಿ ಸಲ್ಲಿಸಿದ್ದು ಅದರಲ್ಲಿ 30 ಜನರು ಸರ್ಕಾರಕ್ಕೆ ಹಣವನ್ನು ಪಾವತಿ ಮಾಡಿದ್ದಾರೆ. ಆದರೆ ಮೂಡಿಗೆರೆ ತಹಶೀಲ್ದಾರ್ ಅವರು ಹಕ್ಕುಪತ್ರ ನೀಡಲು ಹಿಂದೇಟು ಹಾಕುತ್ತಿದ್ದು ಇದರಿಂದ ಬೇಸತ್ತು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿಯವರು ಮೌನ ಪ್ರತಿಭಟನೆ ಆರಂಭಿಸಿದ್ದಾರೆ. ಗ್ರಾಮ ಪಂಚಾಯತಿ ಉಪಾಧ್ಯಕ್ಷ ನವೀನ್ ಹಾವಳಿ ಮಾತನಾಡಿ ಈ ಭಾಗದಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸ ಮಾಡುತ್ತಿದ್ದು 94 ಸಿ ಅರ್ಜಿ ಸಲ್ಲಿಸಿ ಎರಡು ವರ್ಷ ಕಳೆದರೂ ಹಕ್ಕುಪತ್ರ ನೀಡದೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ. ಗ್ರಾಮಸ್ಥರು ಕಚೇರಿಗಳಿಗೆ ಅಲೆದು ಅಲೆದು ರೋಸಿ ಹೋಗಿದ್ದಾರೆ. ಇದರಿಂದ ಖುದ್ದಾಗಿ ನಾನೇ ಬಂದರು ಮೂಡಿಗೆರೆ ತಾಲೂಕು ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಅದರಿಂದ ಬೇಸತ್ತು ಮೌನ ಪ್ರತಿಭಟನೆ ಮಾಡುತ್ತಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು