4:59 PM Sunday26 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಹಕ್ಕುಪತ್ರ ನೀಡಲು ಹಿಂದೇಟು: ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಒಂಟಿ ಮೌನ ಪ್ರತಿಭಟನೆ

05/09/2023, 21:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಕ್ಕುಪತ್ರ ನೀಡಲು ಹಿಂದೇಟು ನೀತಿ ಅನುಸರಿಸುವುದನ್ನು ಪ್ರತಿಭಟಿಸಿ ಮೂಡಿಗೆರೆ ತಾಲ್ಲೂಕಿನ ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮೂಡಿಗೆರೆ ಮಿನಿ ವಿಧಾನಸೌಧದ ಎದುರು ಏಕಾಂಗಿಯಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ.


ಎರಡು ವರ್ಷಗಳಿಂದ ನಿಡುವಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರ್ಕಲ್ ನಿಡುವಳೆ ಗ್ರಾಮದ 70ಕ್ಕೂ ಹೆಚ್ಚು ಗ್ರಾಮಸ್ಥರು 94 ಸಿಯಲ್ಲಿ ಅರ್ಜಿ ಸಲ್ಲಿಸಿದ್ದು ಅದರಲ್ಲಿ 30 ಜನರು ಸರ್ಕಾರಕ್ಕೆ ಹಣವನ್ನು ಪಾವತಿ ಮಾಡಿದ್ದಾರೆ. ಆದರೆ ಮೂಡಿಗೆರೆ ತಹಶೀಲ್ದಾರ್ ಅವರು ಹಕ್ಕುಪತ್ರ ನೀಡಲು ಹಿಂದೇಟು ಹಾಕುತ್ತಿದ್ದು ಇದರಿಂದ ಬೇಸತ್ತು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿಯವರು ಮೌನ ಪ್ರತಿಭಟನೆ ಆರಂಭಿಸಿದ್ದಾರೆ. ಗ್ರಾಮ ಪಂಚಾಯತಿ ಉಪಾಧ್ಯಕ್ಷ ನವೀನ್ ಹಾವಳಿ ಮಾತನಾಡಿ ಈ ಭಾಗದಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸ ಮಾಡುತ್ತಿದ್ದು 94 ಸಿ ಅರ್ಜಿ ಸಲ್ಲಿಸಿ ಎರಡು ವರ್ಷ ಕಳೆದರೂ ಹಕ್ಕುಪತ್ರ ನೀಡದೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ. ಗ್ರಾಮಸ್ಥರು ಕಚೇರಿಗಳಿಗೆ ಅಲೆದು ಅಲೆದು ರೋಸಿ ಹೋಗಿದ್ದಾರೆ. ಇದರಿಂದ ಖುದ್ದಾಗಿ ನಾನೇ ಬಂದರು ಮೂಡಿಗೆರೆ ತಾಲೂಕು ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಅದರಿಂದ ಬೇಸತ್ತು ಮೌನ ಪ್ರತಿಭಟನೆ ಮಾಡುತ್ತಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು