8:31 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಹಕ್ಕುಪತ್ರ ನೀಡಲು ಹಿಂದೇಟು: ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಒಂಟಿ ಮೌನ ಪ್ರತಿಭಟನೆ

05/09/2023, 21:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಕ್ಕುಪತ್ರ ನೀಡಲು ಹಿಂದೇಟು ನೀತಿ ಅನುಸರಿಸುವುದನ್ನು ಪ್ರತಿಭಟಿಸಿ ಮೂಡಿಗೆರೆ ತಾಲ್ಲೂಕಿನ ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮೂಡಿಗೆರೆ ಮಿನಿ ವಿಧಾನಸೌಧದ ಎದುರು ಏಕಾಂಗಿಯಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ.


ಎರಡು ವರ್ಷಗಳಿಂದ ನಿಡುವಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರ್ಕಲ್ ನಿಡುವಳೆ ಗ್ರಾಮದ 70ಕ್ಕೂ ಹೆಚ್ಚು ಗ್ರಾಮಸ್ಥರು 94 ಸಿಯಲ್ಲಿ ಅರ್ಜಿ ಸಲ್ಲಿಸಿದ್ದು ಅದರಲ್ಲಿ 30 ಜನರು ಸರ್ಕಾರಕ್ಕೆ ಹಣವನ್ನು ಪಾವತಿ ಮಾಡಿದ್ದಾರೆ. ಆದರೆ ಮೂಡಿಗೆರೆ ತಹಶೀಲ್ದಾರ್ ಅವರು ಹಕ್ಕುಪತ್ರ ನೀಡಲು ಹಿಂದೇಟು ಹಾಕುತ್ತಿದ್ದು ಇದರಿಂದ ಬೇಸತ್ತು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿಯವರು ಮೌನ ಪ್ರತಿಭಟನೆ ಆರಂಭಿಸಿದ್ದಾರೆ. ಗ್ರಾಮ ಪಂಚಾಯತಿ ಉಪಾಧ್ಯಕ್ಷ ನವೀನ್ ಹಾವಳಿ ಮಾತನಾಡಿ ಈ ಭಾಗದಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸ ಮಾಡುತ್ತಿದ್ದು 94 ಸಿ ಅರ್ಜಿ ಸಲ್ಲಿಸಿ ಎರಡು ವರ್ಷ ಕಳೆದರೂ ಹಕ್ಕುಪತ್ರ ನೀಡದೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ. ಗ್ರಾಮಸ್ಥರು ಕಚೇರಿಗಳಿಗೆ ಅಲೆದು ಅಲೆದು ರೋಸಿ ಹೋಗಿದ್ದಾರೆ. ಇದರಿಂದ ಖುದ್ದಾಗಿ ನಾನೇ ಬಂದರು ಮೂಡಿಗೆರೆ ತಾಲೂಕು ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಅದರಿಂದ ಬೇಸತ್ತು ಮೌನ ಪ್ರತಿಭಟನೆ ಮಾಡುತ್ತಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು